ಕೆಬಿಜೆಎನ್ಎಲ್ ಮುಖ್ಯ ಕಾಲುವೆಯಲ್ಲಿ ನೀರು ಹರಿಸಲಾಗುತ್ತಿದ್ದು, ಕಾಲುವೆಯಲ್ಲಿ ಜಂಗಲ್ ಕಟಿಂಗ್ ಸೇರಿದಂತೆ ಸಣ್ಣಪುಟ್ಟ ಕಾಮಗಾರಿಗಳನ್ನೂ ಕೈಗೊಳ್ಳದೇ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಕೊನೆ ಭಾಗದ ರೈತರಿಗೆ ನೀರು ತಲುಪುವುದಿಲ್ಲ. ಕೆಬಿಜೆಎನ್ಎಲ್ ಅಧಿಕಾರಿಗಳ ವರ್ತನೆ, ಕಾರ್ಯವೈಖರಿ ಬೇಸರ ಮೂಡಿಸಿದೆ ಎಂದು ರೈತರಾದ ಪರಮಣ್ಣ ಜಂಪಾ, ಸೋಮಣ್ಣ ಜಂಪಾ, ಚಂದ್ರು ವಜ್ಜಲ್ ಅಸಮಾಧಾನ ವ್ಯಕ್ತಪಡಿಸಿದರು.