‘ಧರ್ಮದ ಆಧಾರದಲ್ಲಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ ಎಂಬುದನ್ನು ‘ರಾಜಕುಮಾರ’ (ರಾಹುಲ್ ಗಾಂಧಿ) ಹಾಗೂ ಅವರ ಪಕ್ಷದ ಮುಖಂಡರು ಘೋಷಣೆ ಮಾಡಬೇಕು. ಸಂವಿಧಾನದೊಂದಿಗೆ ಆಟವಾಡುವುದಿಲ್ಲ ಮತ್ತು ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ.
‘ನಾನು ಎಲ್ಲಿಯವರೆಗೆ ಅಧಿಕಾರದಲ್ಲಿರುತ್ತೇನೋ ಅಲ್ಲಿಯವರೆಗೂ ಮೀಸಲಾತಿಯಲ್ಲಿ ಆಟವಾಡಲು ಯಾರಿಗೂ ಬಿಡುವುದಿಲ್ಲ. ಕಾಂಗ್ರೆಸ್ ಮತ್ತು ಅವರ ಜನರು ಕೇಳಿಸಿಕೊಳ್ಳಬೇಕು, ‘ಇದು ಮೋದಿ’. ಸಂವಿಧಾನದ ಹೆಸರಿನಲ್ಲಿ ಮೀಸಲಾತಿಯಲ್ಲಿ ಕೈ ಆಡಿಸಲು ಎಂದಿಗೂ ಬಿಡುವುದಿಲ್ಲ’ ಎಂದು ಪ್ರಧಾನಿ ಗುಡುಗಿದ್ದಾರೆ.
ನರೇಂದ್ರ ಮೋದಿ ಅವರ ತವರು ನೆಲವಾದ ಗುಜರಾತ್ನಲ್ಲಿ ಲೋಕಸಭಾ ಚುನಾವಣೆಯ 3ನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.