ಇಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ‘ಬಿಜೆಪಿ ಯದುವೀರ್ ಅವರಿಗೆ ಟಿಕೆಟ್ ಘೋಷಿಸುವ ಮುನ್ನಾ ದಿನ ದೂರವಾಣಿ ಕರೆ ಮಾಡಿದ್ದ ಸಿಎಂ ಮತ್ತು ಡಿಸಿಎಂ, ರಾಜಕಾರಣದಲ್ಲಿ ಆಸಕ್ತಿ ಇದ್ದರೆ ಕಾಂಗ್ರೆಸ್ನಿಂದ ಟಿಕೆಟ್ ನೀಡುವುದಾಗಿ ಹೇಳಿದ್ದರು. ಅವರಿಗೆ ಪ್ರತಿಕ್ರಿಯಿಸಿದ್ದ ಯದುವೀರ್, ರಾಜಕಾರಣದಲ್ಲಿ ಆಸಕ್ತಿ ಇದೆ ಎಂದು ಸ್ಪರ್ಧಿಸುತ್ತಿಲ್ಲ. ನರೇಂದ್ರ ಮೋದಿ ಅವರ ಅಪೇಕ್ಷೆಯ ಮೇರೆಗೆ ದೇಶದ ಸೇವೆಗೆ ಬರುತ್ತಿದ್ದೇನೆ ಎಂದಿದ್ದರು’ ಎಂದು ವಿಜಯೇಂದ್ರ ತಿಳಿಸಿದರು.