ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟ್ಯ ಪ್ರವೀಣೆ ಆಶಾ

Last Updated 3 ಮಾರ್ಚ್ 2014, 19:30 IST
ಅಕ್ಷರ ಗಾತ್ರ

ತಮ್ಮ ಹದಿನಾರನೇ ವಯಸ್ಸಿನಲ್ಲೇ ಭರತನಾಟ್ಯ ಅಭ್ಯಾಸ ಆರಂಭಿಸಿದ ಆಶಾ ಅವರು ‘ನಾಟ್ಯಾಂಜನ’ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ಸಂಸ್ಥೆಗೆ ಈಗ ದಶಮಾನೋತ್ಸವ ಸಂಭ್ರಮ.

ನೃತ್ಯಕ್ಕೆ ಸಂಬಂಧಪಟ್ಟಂತೆ ಇತರೆ ಪೂರಕ ತರಬೇತಿಯನ್ನು ಪಡೆದಿರುವ ಆಶಾ ಅವರು ನಾಟ್ಯಾಂಜನ ಸಂಸ್ಥೆಯ ಮೂಲಕ ನೃತ್ಯಾಸಕ್ತ ಮಕ್ಕಳಿಗೆ ನಿರಂತರ ತರಬೇತಿ ನೀಡುತ್ತಿದ್ದಾರೆ. ಅಲ್ಲದೇ ಹಲವು ಶಾಲೆಗಳಲ್ಲಿಯೂ ಮಕ್ಕಳಿಗೆ ನೃತ್ಯ ತರಬೇತಿ ನೀಡಿ ಭರತನಾಟ್ಯದ ಮಹತ್ವವನ್ನು ಸಾರುತ್ತಿದ್ದಾರೆ.

ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ, ಹಂಪಿ ಉತ್ಸವ, ಲಕ್ಕುಂಡಿ ಹಾಗೂ ಆನೆಗುಂದಿ ಉತ್ಸವ, ಭೈರವ ಕಲಾ ಬಳಗ ಆಯೋಜಿಸಿದ್ದ ರಾಜ್ಯ ಮಟ್ಟದ ಜನಪದ ಲೋಕ ಸಾಂಸ್ಕೃತಿಕ ಕಲಾ ಮೇಳ, ಜಿಲ್ಲಾ ಸಾಹಿತ್ಯ ಸಮ್ಮೇಳನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನೃತ್ಯ ಕಾರ್ಯಕ್ರಮ, ಮೈಸೂರು ದಸರಾ ಉತ್ಸವ, ಬೆಂಗಳೂರಿನ ಇಸ್ಕಾನ್ ದೇವಾಲಯ ಆಯೋಜಿಸಿದ್ದ ನೃತ್ಯ ಕಾರ್ಯಕ್ರಮ, ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಕಾರ್ಯಕ್ರಮ, ಅಂತರರಾಷ್ಟ್ರೀಯ ಯೋಗ ಸಮ್ಮೇಳನ ಮುಂತಾದ ನೂರಾರು ನೃತ್ಯ ಕಾರ್ಯಕ್ರಮಗಳನ್ನು ನೀಡಿ ಜನ ಮನ ಗೆದ್ದಿರುವ ಆಶಾ ಹತ್ತಾರು ನೃತ್ಯ ಸಂಯೋಜನೆ ಮಾಡಿ ಸೈ ಎನಿಸಿಕೊಂಡಿದ್ದಾರೆ.

ವಿದ್ವಾನ್ ಎಂ.ಆರ್. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ನೃತ್ಯಾಭ್ಯಾಸ ಮುಂದುವರಿಸಿರುವ ಆಶಾ ದೂರದರ್ಶನದ  ಕಲಾವಿದೆಯಾದೆಯೂ ಹೌದು.  ಅಲ್ಲದೇ ಭಾರತ ಸರ್ಕಾರದ ಸೆಂಟ್ರಲ್ ಫಾರ್ ಕಲ್ಚರಲ್ ರಿಸೋರ್ಸ್ ಅಂಡ್ ಟ್ರೈನಿಂಗ್ ಸಂಸ್ಥೆಯ ಶಿಷ್ಯ ವೇತನಕ್ಕೆ ಭಾಜನರಾಗಿದ್ದಾರೆ. ಕರ್ನಾಟಕ ನೃತ್ಯ ಅಕಾಡೆಮಿಯ ಬಾಲ ಪ್ರತಿಭೆ ಪುರಸ್ಕಾರ ಸೇರಿದಂತೆ ಹಲವು ಪುರಸ್ಕಾರಗಳು ಇವರಿಗೆ ದೊರೆತಿವೆ.

ಭಾರತ ಪರಂಪರೆಯ ಬಗ್ಗೆ ಅಪಾರ ಪ್ರೀತಿ ಗೌರವ ಹೊಂದಿರುವ ಆಶಾ ಬಡ ಮಕ್ಕಳ ಹಾಗೂ ಅಶಕ್ತರ ಸಹಾಯಕ್ಕಾಗಿ ಯಾವುದೇ ಸಂಘ ಸಂಸ್ಥೆ ಕಾರ್ಯಕ್ರಮ ಆಯೋಜಿಸಿದಲ್ಲಿ ಉಚಿತವಾಗಿ ನೃತ್ಯ ಕಾರ್ಯಕ್ರಮ ನೀಡುತ್ತಿದ್ದಾರೆ. ಮಾಹಿತಿಗೆ 9902557647/9611339596.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT