ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು ನುಡಿ ಸಂಸ್ಕೃತಿಯ 13ನೇ ರಾಷ್ಟ್ರೀಯ ಸಮ್ಮೇಳನ ’ಆಳ್ವಾಸ್ ನುಡಿಸಿರಿ 2016’ ನವೆಂಬರ್ 18,19 ಮತ್ತು 20ರಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ.
’ಕರ್ನಾಟಕ–ನಾಳೆಗಳ ನಿರ್ಮಾಣ’ ಎಂಬ ಪರಿಕಲ್ಪನೆಯಲ್ಲಿ ನುಡಿಸಿರಿ ನಡೆಯಲಿದೆ. ನವೆಂಬರ್ 18ರಂದು ಬೆಳಿಗ್ಗೆ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಸದಸ್ಯತ್ವ ಶುಲ್ಕ ₹ 100 ಪಾವತಿಸಿ ಸಮ್ಮೇಳನದಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ.
ವಿವರಗಳಿಗೆ ಆಳ್ವಾಸ್ ನುಡಿಸಿರಿ ಕಚೇರಿ ದೂರವಾಣಿ 08258–261229 ಅನ್ನು ಸಂಪರ್ಕಿಸುವಂತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.