ನವದೆಹಲಿ: ನ್ಯೂಜಿಲೆಂಡ್ನಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಭಾರತ ತಂಡ ಸಂಭ್ರಮಿಸುತ್ತಿರುವ ವೇಳೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪರಿಶ್ರಮಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ತಂಡದ ಗೆಲುವಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್, ನಮ್ಮ ತಂಡದ ಎಲ್ಲ ಆಟಗಾರರು ಪರಿಶ್ರಮಿಸಿದ್ದಾರೆ. ಅವರ ಬಗ್ಗೆ ಹೆಮ್ಮೆಯಿದೆ. ಅವರ ಸಾಧನೆ ಬಗ್ಗೆ ಖುಷಿಯಾಗುತ್ತಿದೆ ಎಂದಿದ್ದಾರೆ.