ಶಿರಸಿ: ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಸಂಬಂಧ ಇರಬೇಕು. ಶಿಕ್ಷಕರು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡರೆ ಮಾತ್ರ ವಿದ್ಯಾರ್ಥಿ ಉತ್ತಮವಾಗಲು ಸಾಧ್ಯ ಎಂದು ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಎಂ.ವಿ. ಜೋಶಿ ಹೇಳಿದರು.
ಇಲ್ಲಿನ ಎಂ.ಎಂ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ವೃತ್ತಿಯನ್ನು ಪ್ರೀತಿಸಿದರೆ ಮಾತ್ರ ಸಭ್ಯತೆ ಮತ್ತು ಧನ್ಯತೆ ಭಾವ ಬರುತ್ತದೆ. ಶಿಕ್ಷಕರಿಗೆ ವೈಯಕ್ತಿಕ ಜೀವನ ಇರಬಾರದು. ಹಾಗಾದಾಗ ಮಾತ್ರ ಯಶಸ್ವಿ ಶಿಕ್ಷಕನಾಗಲು ಸಾಧ್ಯ ಎಂದರು.