ಹುಬ್ಬಳ್ಳಿ: ಪಾಕಿಸ್ತಾನ ಪರ ಹೇಳಿಕೆ ನೀಡಿದ ಮಾಜಿ ಸಂಸದೆ ರಮ್ಯಾ ಅವರಿಗೆ ಯಾರ ಬೆಂಬಲದ ಅಗತ್ಯವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಇಲ್ಲಿ ಹೇಳಿದರು.
ಧಾರವಾಡ ಐಐಟಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ‘ರಮ್ಯಾ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದರೂ ಕಾಂಗ್ರೆಸ್ನವರಾರೂ ರಮ್ಯಾ ಬೆಂಬಲಕ್ಕೆ ನಿಲ್ಲಲಿಲ್ಲವಲ್ಲ’ ಎಂದು ಪತ್ರಕರ್ತರು ಕೇಳಿದಾಗ, ‘ಅವರಿಗೆ ಸ್ವಂತವಾಗಿ ಹೋರಾಡುವ ತಾಕತ್ತಿದೆ.
ಆದ್ದರಿಂದ ಅವರಿಗೆ ಯಾರ ಬೆಂಬಲ ಬೇಡ. ಹಾಗೇನಾದರೂ ಬೇಕಿದ್ದರೆ ಕಾಂಗ್ರೆಸ್ ಅವರ ಜೊತೆಗಿದೆ’ ಎಂದರು.