ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ 11 ಗಂಟೆ ಸಭೆ ನಡೆಸಿದ ಪುದುಚೇರಿ ಸಿ.ಎಂ

Last Updated 28 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಪುದುಚೇರಿ (ಪಿಟಿಐ): ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಅವರು ಸತತ 11 ಗಂಟೆ ಕಾಲ ಸಭೆ ನಡೆಸಿ ದಾಖಲೆ ನಿರ್ಮಿಸಿದ್ದಾರೆ.

ಸೋಮವಾರ ಅವರು ಪುದುಚೇರಿಯ 2016–17ನೆ ಸಾಲಿನ ಬಜೆಟ್‌ ಮಂಡಿಸಲಿದ್ದು, ಅದಕ್ಕೆ ಅಂತಿಮ ಸ್ವರೂಪ ನೀಡಲು ಪೂರ್ವಭಾವಿಯಾಗಿ ಶನಿವಾರ ಸಚಿವರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದರು.

‘ಶನಿವಾರ ಸಂಜೆ 6 ಗಂಟೆಗೆ ಆರಂಭವಾದ ಸಭೆ ಭಾನುವಾರ ನಸುಕಿನ 4.30ಕ್ಕೆ ಮುಕ್ತಾಯವಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸರ್ಕಾರ ಈ ವರೆಗೆ ಜಾರಿಮಾಡಿರುವ ವಿವಿಧ ಯೋಜನೆಗಳು, ಇನ್ನಷ್ಟು ಜನರಿಗೆ ಅನುಕೂಲವಾಗುವಂತೆ ಈ ಯೋಜನೆಗಳನ್ನು ವಿಸ್ತರಿಸುವುದೇ ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT