ಕೆ.ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ‘ಈಶ್ವರಪ್ಪ ಅವರಿಗೆ ಈಗ ಹಿಂದುಳಿದ ವರ್ಗದ ಜನ ನೆನಪಾಗಿದ್ದಾರೆ. ಈ ರಾಜ್ಯದ ಹಿಂದುಳಿದವರಿಗೆ, ದಲಿತರಿಗೆ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂಬುದು ಗೊತ್ತಿದೆ. ಯಡಿಯೂರಪ್ಪ ಕಾಲು ಎಳೆಯುವ ಉದ್ದೇಶದಿಂದ ಈಶ್ವರಪ್ಪ ರಾಯಣ್ಣ ಬ್ರಿಗೇಡ್ ಕಟ್ಟಿದ್ದಾರೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಹಿಂದುಳಿದವರು ಹಾಗೂ ದಲಿತರ ಮತಗಳು ಬೇಕಂತೆ’ ಎಂದು ವ್ಯಂಗವಾಡಿದರು.