ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಸ್ಯರಿಂದ ಕಿರುಕುಳ: ಗ್ರಾ.ಪಂ ಅಧ್ಯಕ್ಷೆ ಆತ್ಮಹತ್ಯೆಗೆ ಯತ್ನ

Last Updated 29 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ಚಾಮರಾಜನಗರ: ಸದಸ್ಯರ ಕಿರುಕುಳದಿಂದ ಬೇಸತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದಿದೆ.

ಅಧ್ಯಕ್ಷೆ ರಾಣಿ ಆತ್ಮಹತ್ಯೆಗೆ ಯತ್ನಿಸಿದವರು. ಕೂಡಲೇ, ಅವರನ್ನು ಗುಂಡ್ಲುಪೇಟೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಚೇತರಿಸಿ ಕೊಂಡಿದ್ದಾರೆ.

ಗ್ರಾಮಗಳಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಮಂಜೂರಾಗಿರುವ ವೈಯಕ್ತಿಕ ಶೌಚಾಲಯ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದೇವೆ. ಜತೆಗೆ, ಅವ್ಯವಹಾರದ ಬಗ್ಗೆ ನಮ್ಮ ಬಳಿ ಮಾಹಿತಿ ಇದೆ. ಇದನ್ನು ಸಾರ್ವಜನಿ ಕವಾಗಿ ಬಹಿರಂಗಪಡಿಸುತ್ತೇವೆ ಎಂದು ಅಧ್ಯಕ್ಷೆಗೆ ಅದೇ ಪಂಚಾಯಿತಿಯ ಸದಸ್ಯ ಮತ್ತು ಸದಸ್ಯೆಯೊಬ್ಬರ ಪುತ್ರ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT