16 ವರುಷಗಳ ಹಿಂದೆ ಸಂಭವಿಸಿದ ಬಸ್ ಅಪಘಾತದಲ್ಲಿ ತಂಗವೇಲುವಿನ ಬಲ ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು. ಪರಿಣಾಮ ಮಂಡಿಯ ಕೆಳಗಿನ ಭಾಗವನ್ನು ಕತ್ತರಿಸಬೇಕಾಗಿ ಬಂತು. ವಾಲಿಬಾಲ್ ಆಟದಲ್ಲಿ ಚುರುಕಾಗಿದ್ದ ಈತನಿಗೆ ಒಂದ ಕಾಲು ಕಳೆದುಕೊಂಡಾಗ ಬದುಕೇ ದುಸ್ತರವೆನಿಸಿಬಿಟ್ಟಿತ್ತು. ಆ ಹೊತ್ತಲ್ಲಿ ತಂಗವೇಲುವಿನ ಅಮ್ಮ ಸರೋಜಾ ಮಗನಿಗೆ ಧೈರ್ಯ ತುಂಬಿದರು. ಅಪ್ಪ ಬಿಟ್ಟು ಹೋದ ಕುಟುಂಬದಲ್ಲಿ ಅಮ್ಮನೇ ಆಧಾರ ಸ್ತಂಬವಾಗಿದ್ದರು, ಬೇರೆ ಯಾರ ಸಹಾಯವಿಲ್ಲದೆಯೇ ಸರೋಜಾ ತನ್ನ ಮಕ್ಕಳನ್ನು ಬೆಳೆಸಿದರು. ತರಕಾರಿ ಮಾರಿ, ಮನೆಕೆಲಸ ಮಾಡಿ ದಿನ ಸಾಗಿಸುತ್ತಿದ್ದ ಸರೋಜಾ, ಮಗ ಮತ್ತೆ ಆಟದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಿದರು.