ಬೆಂಗಳೂರು: ಕಾವೇರಿ ಕೊಳ್ಳದ ಕೆಆರ್ಎಸ್, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ವಿಧಾನ ಪರಿಷತ್ನಲ್ಲಿ ನಿರ್ಣಯ ಅಂಗೀಕರಿಸಲಾಯಿತು.
ಕಲಾಪ ಆರಂಭವಾದ ನಂತರ ಮೊದಲಿಗೆ ಅಗಲಿದ ರಾಜಕೀಯ ಮುಖಂಡರು ಹಾಗೂ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಲಾಯಿತು.
ಪರಿಷತ್ನಲ್ಲಿ ಎ. ರವಿ ನಿರ್ಣಯ ಮಂಡಿಸಿದರು. ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಿರ್ಣಯ ಅನುಮೋದಿಸಿದರು. ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ರಾಜ್ಯದ ಸಂಕಷ್ಟ ಸ್ಥಿತಿಯ ಬಗ್ಗೆ ಮಾತನಾಡಿದರು.