ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರಾಗಿ ಕೆ.ಜೆ. ಜಾರ್ಜ್‌ ಪ್ರಮಾಣ ವಚನ ಸ್ವೀಕಾರ

Last Updated 26 ಸೆಪ್ಟೆಂಬರ್ 2016, 9:13 IST
ಅಕ್ಷರ ಗಾತ್ರ

ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಸಚಿವ ಸ್ಥಾನ ಕಳೆದುಕೊಂಡಿದ್ದ ಶಾಸಕ ಕೆ.ಜೆ. ಜಾರ್ಜ್‌ ಅವರು ಇಂದು ಮರಳಿ ಸಂಪುಟಕ್ಕೆ ಸೇರಿದ್ದಾರೆ.

ಸೋಮವಾರ ಬೆಳಗ್ಗೆ 10.15ಕ್ಕೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಜಾರ್ಜ್ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಜು.೧೮ ರಂದು ರಾಜಿನಾಮೆ ಕೊಟ್ಟಿದ್ದ ಜಾರ್ಜ್ ಎರಡೇ ತಿಂಗಳಲ್ಲಿ ಮತ್ತೆ ಸಚಿವ ಸ್ಥಾನಕ್ಕೆ ಮರಳಿದ್ದಾರೆ.

ಮತ್ತೆ ಸಚಿವ ಸಂಪುಟ ಸೇರಿರುವ ಜಾರ್ಜ್ ಅವರಿಗೆ ಈ ಹಿಂದೆ ನಿರ್ವಹಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೇ ನೀಡುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT