ಬೆಂಗಳೂರು: ನಿರಾಕ್ಷೇಪಣಾ ಪತ್ರ ನೀಡಲು ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಕಾರ್ಮಿಕ ಇಲಾಖೆ ಹಿರಿಯ ನಿರೀಕ್ಷಕ ನಾಗರಾಜಪ್ಪ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಖಾಸಗಿ ವ್ಯಕ್ತಿಯೊಬ್ಬರು ವಾಣಿಜ್ಯ ಮಳಿಗೆ ತೆರೆಯುವ ಉದ್ದೇಶದಿಂದ ಅಗತ್ಯವಿದ್ದ ನಿರಾಕ್ಷೇಪಣಾ ಪತ್ರ ಪಡೆಯಲು ಬನ್ನೇರುಘಟ್ಟ ರಸ್ತೆಯಲ್ಲಿನ ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಪತ್ರ ನೀಡಲು ನಾಗರಾಜಪ್ಪ ₹ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.