ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಡಿಕ್ಕಿ: ಪಾದಚಾರಿ ಸಾವು

Last Updated 26 ಸೆಪ್ಟೆಂಬರ್ 2016, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ದೇವರಬೀಸನಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಅಂಬೇಡ್ಕರ್‌ನಗರ ನಿವಾಸಿ ಬೈಯಪ್ಪ (60) ಎಂಬುವರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.

‘ಕೂಲಿ ಕೆಲಸ ಮಾಡುತ್ತಿದ್ದ ಬೈಯಪ್ಪ, ಸಂಜೆ 6ರ ಸುಮಾರಿಗೆ ದೇವರಬೀಸನಹಳ್ಳಿ ರಸ್ತೆ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದರು. ಇದೇ ವೇಳೆ ಎದುರಿನಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಬೈಯಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರನ್ನು ನಿಮ್ಹಾನ್ಸ್‌ಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದರು’ ಎಂದು ವಿಮಾನ ನಿಲ್ದಾಣ ಸಂಚಾರ ಪೊಲೀಸರು ತಿಳಿಸಿದರು.

‘ಘಟನೆ ಬಳಿಕ ಸ್ಥಳದಲ್ಲೇ ದ್ವಿಚಕ್ರ ವಾಹನ ಬಿಟ್ಟು ಸವಾರ ಪರಾರಿಯಾಗಿದ್ದಾರೆ. ಅವರ ಸುಳಿವು ಪತ್ತೆ ಹಚ್ಚಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT