ಬೆಂಗಳೂರು ನಗರದಲ್ಲಿ ಗೋಡೆಗಳನ್ನು ವಿರೂಪಗೊಳಿಸಿದವರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿಎಂಟಿಎಫ್ನಲ್ಲಿ ಪ್ರಕರಣ ದಾಖಲಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು ಸಂತೋಷದ ಸಂಗತಿ.
ಇಂತಹ ಕಠಿಣ ಕ್ರಮಕ್ಕೆ ಮುಂದಾಗಿರುವ ಪಾಲಿಕೆಯ ಆಯುಕ್ತರ ಬಗ್ಗೆ ಅಭಿಮಾನ ಮೂಡಿತು. ಆದರೆ ಇದು ಕೇವಲ ತೋರಿಕೆಯ ಕೆಲಸ ಆಗಬಾರದು. ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಆಗ ಮಾತ್ರ ಈ ಪಿಡುಗನ್ನು ನಿಯಂತ್ರಿಸಲು ಸಾಧ್ಯ.
–ಎಚ್. ತುಕಾರಾಂ, ಬೆಂಗಳೂರು