ಶ್ರೀನಗರ: ಪ್ರತ್ಯೇಕತಾವಾದಿ ನಾಯಕರ ಆಜ್ಞೆಯನ್ನು ಉಲ್ಲಂಘಿಸಿದ ಸ್ಥಳೀಯ ನಾಗರಿಕರ ವಾಹನಗಳ ಮೇಲೆ ನಡೆದ ಕಲ್ಲುತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ದಾಳಿ ವೇಳೆ ಗಂಭೀರವಾಗಿ ಗಾಯ ಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೋಝಿಯಾ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದರು.