ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಳಗ್ಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ನಾಯಕರ ಸಭೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ ಬಿಜೆಪಿ ನಾಯಕರಾದ ಯಡಿಯೂರಪ್ಪ, ಜಗದೀಶ ಶೆಟ್ಟರ್, ವೈಎಸ್ ವಿ ದತ್ತಾ ಭಾಗಿಯಾಗಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಏನೇನಾಯ್ತು?
ನಾಳೆಯವರೆಗೆ ನೀರು ಬಿಡಬೇಡಿ. ನಾಳೆಯವರಗೆ ಕಾದು ನೋಡೋಣ ಎಂದು ಸರ್ವ ಪಕ್ಷಗಳು ಅಭಿಪ್ರಾಯ ತಿಳಿಸಿವೆ.
ಸರ್ವಪಕ್ಷಗಳ ನಾಯಕರ ಅಭಿಪ್ರಾಯವನ್ನು ಆಲಿಸಿದ ಮುಖ್ಯಮಂತ್ರಿ ಅವರು ಕಾದುನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ತಮಿಳುನಾಡಿಗೆ ನಾಳೆಯವರೆಗೆ ನೀರು ಹರಿಯಬಿಡದಿರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದೇ ವೇಳೆ ನಾಳೆ ನವದೆಹಲಿಯಲ್ಲಿ ನಡೆಯಲಿರುವ ಸಂಧಾನ ಸಭೆಯ ನಂತರವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ,