<p><strong>ಬೆಂಗಳೂರು: </strong>ಸಂಶೋಧಕ ಎಂ.ಎಂ. ಕಲಬುರ್ಗಿ, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪಾನ್ಸರೆ ಅವರನ್ನು ಕೊಂದಿದ್ದು ಒಂದೇ ತಂಡವೆಂದು ತನಿಖಾ ತಂಡಗಳು ಬಲವಾದ ಅನುಮಾನ ವ್ಯಕ್ತಪಡಿಸಿವೆ.</p>.<p>‘ಮೂರೂ ಹತ್ಯೆ ನಡೆದ ಸ್ಥಳದಲ್ಲಿ ದೊರಕಿದ್ದ ಪಿಸ್ತೂಲಿನ ಖಾಲಿ ಕೋಕಾಗಳನ್ನು (ಕಾಟ್ರೇಜ್) ಪರೀಕ್ಷೆಗಾಗಿ ಇಂಗ್ಲೆಂಡ್ನ ನ್ಯೂ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಯ ಪೊಲೀಸರು, ಒಂದೇ ತಂಡದ ಸದಸ್ಯರು ಈ ಹತ್ಯೆಗಳನ್ನು ಮಾಡಿರುವುದಾಗಿ ಮೌಖಿಕವಾಗಿ ಹೇಳಿದ್ದಾರೆ’ ಎಂದು ಸಿಐಡಿಯ ತನಿಖಾಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೈಕ್ನಲ್ಲಿ ಬಂದು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಹತ್ಯೆಗೆ ದೇಶೀಯ ನಿರ್ಮಿತ 7.65 ಎಂ.ಎಂ. ಪಿಸ್ತೂಲ್ ಬಳಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಶೀಲನೆ ನಡೆಸುತ್ತಿರುವ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ವರದಿಗಾಗಿ ಕಾಯುತ್ತಿದ್ದೇವೆ’ ಎಂದು ತಿಳಿಸಿದರು.</p>.<p><strong>ಗೋಪ್ಯ ಸ್ಥಳದಲ್ಲಿ ದುಷ್ಕರ್ಮಿಗಳು: </strong>2013ರ ಆಗಸ್ಟ್ನಲ್ಲಿ ನರೇಂದ್ರ ದಾಭೋಲ್ಕರ್, 2015ರ ಫೆಬ್ರುವರಿನಲ್ಲಿ ಗೋವಿಂದ ಪಾನ್ಸರೆ, 2015ರ ಆಗಸ್ಟ್ 30ರಂದು ಕಲಬುರ್ಗಿ ಹತ್ಯೆ ನಡೆದಿದೆ. ಹತ್ಯೆ ಬಳಿಕ ಪರಾರಿಯಾದ ದುಷ್ಕರ್ಮಿಗಳು ಗೋಪ್ಯ ಸ್ಥಳಗಳಲ್ಲಿ ಅಡಗಿರುವ ಮಾಹಿತಿ ಇದ್ದು, ಅವರಿಗಾಗಿ ತನಿಖಾ ತಂಡಗಳು ಹುಡುಕಾಟ ನಡೆಸಿವೆ.</p>.<p>‘ಮೂರು ಹತ್ಯೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದುಷ್ಕರ್ಮಿಗಳ ಹಾವಭಾವವನ್ನು ತಜ್ಞರು ಪರಿಶೀಲಿಸಿದ್ದಾರೆ. ಮೂರು ಹತ್ಯೆ ಮಾಡಿರುವ ವ್ಯಕ್ತಿಗಳ ಹಾವಭಾವದಲ್ಲಿ ಸಾಕಷ್ಟು ಸಾಮ್ಯತೆ ಇರುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಅವರಿಂದ ಈಗಾಗಲೇ ಹೇಳಿಕೆ ಪಡೆಯಲಾಗಿದ್ದು, ದುಷ್ಕರ್ಮಿಗಳು ಸಿಕ್ಕ ಬಳಿಕ ಆ ಹೇಳಿಕೆಯನ್ನು ಸಾಕ್ಷಿಯನ್ನಾಗಿ ಬಳಸಿಕೊಳ್ಳಲಾಗುವುದು’ ಎಂದು ಸಿಐಡಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಆರೋಪಿಗಳು ಮಹಾರಾಷ್ಟ್ರ ಅಥವಾ ನೇಪಾಳದಲ್ಲಿ ಅವಿತುಕೊಂಡಿರುವ ಅನುಮಾನವಿದೆ. ಅದೇ ಕಾರಣಕ್ಕೆ ಅಲ್ಲೆಲ್ಲ ವಿಶೇಷ ತಂಡಗಳು ನಿಗಾ ಇರಿಸಿವೆ. ಕಾಲ ಕಾಲಕ್ಕೆ ತನಿಖಾ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆದಷ್ಟು ಬೇಗ ಆರೋಪಿಗಳ ನಿಖರ ಮಾಹಿತಿ ಲಭ್ಯವಾಗುವ ವಿಶ್ವಾಸವಿದೆ’ ಎಂದು ಅವರು ಹೇಳಿದರು.</p>.<p><strong>ಉತ್ತರ ಕರ್ನಾಟಕದಲ್ಲಿ ಭಾಷಣ: </strong>ದಾಭೋಲ್ಕರ್ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿರುವ ಆರೋಪಿಯು ಉತ್ತರ ಕರ್ನಾಟಕದ ಹಲವು ನಗರಗಳಲ್ಲಿ ಭಾಷಣ ಮಾಡುತ್ತಿದ್ದರು ಎಂಬ ಮಾಹಿತಿ ತನಿಖಾಧಿಕಾರಿಗಳಿಗೆ ಸಿಕ್ಕಿದೆ.</p>.<p>‘ಹುಬ್ಬಳ್ಳಿ, ಬೆಳಗಾವಿಯಲ್ಲಿ ನಡೆಯುತ್ತಿದ್ದ ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿದ್ದ ಗುಪ್ತ ಸಭೆಗಳಿಗೆ ಆರೋಪಿ ಬಂದು ಹೋಗುತ್ತಿದ್ದರು. ಆ ಸಂಬಂಧ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಯನ್ನೂ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ವಿಚಾರಣೆ ವೇಳೆ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿರುವ ಬಂಧನದಲ್ಲಿರುವ ಆರೋಪಿಯು ‘ಧರ್ಮದ ಏಳಿಗೆಗಾಗಿ ಭಾಷಣ ಮಾಡುತ್ತಿದ್ದೆ ಹೊರತು, ಬೇರೆ ಯಾವುದೇ ದುರುದ್ದೇಶವಿರಲಿಲ್ಲ’ ಎಂದು ಹೇಳಿರುವುದಾಗಿ ಗೊತ್ತಾಗಿದೆ.</p>.<p>ಇನ್ನೂ ಮೂರು ಪ್ರಕರಣಗಳಲ್ಲಿ ಸಾಮ್ಯತೆ ಕಂಡುಬಂದಿದ್ದರಿಂದ ಸಿಐಡಿ, ಪುಣೆಯ ಎಸ್ಐಟಿ ಹಾಗೂ ಸಿಬಿಐ ಅಧಿಕಾರಿಗಳು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ.</p>.<p><strong>***<br /> ಕಲಬುರ್ಗಿ ಒಡನಾಡಿಗಳ ವಿಚಾರಣೆಗೆ ನಿರ್ಧಾರ: </strong>ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗದಿದ್ದರಿಂದ ಕಲಬುರ್ಗಿ ಅವರ ಒಡನಾಡಿಗಳನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಲು ಸಿಐಡಿ ನಿರ್ಧರಿಸಿರುವುದಾಗಿ ಗೊತ್ತಾಗಿದೆ.</p>.<p>ಇತ್ತೀಚೆಗೆ ಧಾರವಾಡ ಸೇರಿದಂತೆ ಕೆಲವೆಡೆ ನಡೆದಿರುವ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಂಡಿರುವ ಅಧಿಕಾರಿಗಳು, ಕಲಬುರ್ಗಿ ಅವರ ಒಡನಾಟದ ಬಗ್ಗೆ ಭಾಷಣ ಮಾಡಿದವರನ್ನು ಸಂಪರ್ಕಿಸುತ್ತಿದ್ದಾರೆ. ಅವರಿಂದ ಲಿಖಿತ ಹೇಳಿಕೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೆಲವರು ಅಧಿಕಾರಿಗಳ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಂಶೋಧಕ ಎಂ.ಎಂ. ಕಲಬುರ್ಗಿ, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪಾನ್ಸರೆ ಅವರನ್ನು ಕೊಂದಿದ್ದು ಒಂದೇ ತಂಡವೆಂದು ತನಿಖಾ ತಂಡಗಳು ಬಲವಾದ ಅನುಮಾನ ವ್ಯಕ್ತಪಡಿಸಿವೆ.</p>.<p>‘ಮೂರೂ ಹತ್ಯೆ ನಡೆದ ಸ್ಥಳದಲ್ಲಿ ದೊರಕಿದ್ದ ಪಿಸ್ತೂಲಿನ ಖಾಲಿ ಕೋಕಾಗಳನ್ನು (ಕಾಟ್ರೇಜ್) ಪರೀಕ್ಷೆಗಾಗಿ ಇಂಗ್ಲೆಂಡ್ನ ನ್ಯೂ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಯ ಪೊಲೀಸರು, ಒಂದೇ ತಂಡದ ಸದಸ್ಯರು ಈ ಹತ್ಯೆಗಳನ್ನು ಮಾಡಿರುವುದಾಗಿ ಮೌಖಿಕವಾಗಿ ಹೇಳಿದ್ದಾರೆ’ ಎಂದು ಸಿಐಡಿಯ ತನಿಖಾಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೈಕ್ನಲ್ಲಿ ಬಂದು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಹತ್ಯೆಗೆ ದೇಶೀಯ ನಿರ್ಮಿತ 7.65 ಎಂ.ಎಂ. ಪಿಸ್ತೂಲ್ ಬಳಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಶೀಲನೆ ನಡೆಸುತ್ತಿರುವ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ವರದಿಗಾಗಿ ಕಾಯುತ್ತಿದ್ದೇವೆ’ ಎಂದು ತಿಳಿಸಿದರು.</p>.<p><strong>ಗೋಪ್ಯ ಸ್ಥಳದಲ್ಲಿ ದುಷ್ಕರ್ಮಿಗಳು: </strong>2013ರ ಆಗಸ್ಟ್ನಲ್ಲಿ ನರೇಂದ್ರ ದಾಭೋಲ್ಕರ್, 2015ರ ಫೆಬ್ರುವರಿನಲ್ಲಿ ಗೋವಿಂದ ಪಾನ್ಸರೆ, 2015ರ ಆಗಸ್ಟ್ 30ರಂದು ಕಲಬುರ್ಗಿ ಹತ್ಯೆ ನಡೆದಿದೆ. ಹತ್ಯೆ ಬಳಿಕ ಪರಾರಿಯಾದ ದುಷ್ಕರ್ಮಿಗಳು ಗೋಪ್ಯ ಸ್ಥಳಗಳಲ್ಲಿ ಅಡಗಿರುವ ಮಾಹಿತಿ ಇದ್ದು, ಅವರಿಗಾಗಿ ತನಿಖಾ ತಂಡಗಳು ಹುಡುಕಾಟ ನಡೆಸಿವೆ.</p>.<p>‘ಮೂರು ಹತ್ಯೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದುಷ್ಕರ್ಮಿಗಳ ಹಾವಭಾವವನ್ನು ತಜ್ಞರು ಪರಿಶೀಲಿಸಿದ್ದಾರೆ. ಮೂರು ಹತ್ಯೆ ಮಾಡಿರುವ ವ್ಯಕ್ತಿಗಳ ಹಾವಭಾವದಲ್ಲಿ ಸಾಕಷ್ಟು ಸಾಮ್ಯತೆ ಇರುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಅವರಿಂದ ಈಗಾಗಲೇ ಹೇಳಿಕೆ ಪಡೆಯಲಾಗಿದ್ದು, ದುಷ್ಕರ್ಮಿಗಳು ಸಿಕ್ಕ ಬಳಿಕ ಆ ಹೇಳಿಕೆಯನ್ನು ಸಾಕ್ಷಿಯನ್ನಾಗಿ ಬಳಸಿಕೊಳ್ಳಲಾಗುವುದು’ ಎಂದು ಸಿಐಡಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಆರೋಪಿಗಳು ಮಹಾರಾಷ್ಟ್ರ ಅಥವಾ ನೇಪಾಳದಲ್ಲಿ ಅವಿತುಕೊಂಡಿರುವ ಅನುಮಾನವಿದೆ. ಅದೇ ಕಾರಣಕ್ಕೆ ಅಲ್ಲೆಲ್ಲ ವಿಶೇಷ ತಂಡಗಳು ನಿಗಾ ಇರಿಸಿವೆ. ಕಾಲ ಕಾಲಕ್ಕೆ ತನಿಖಾ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆದಷ್ಟು ಬೇಗ ಆರೋಪಿಗಳ ನಿಖರ ಮಾಹಿತಿ ಲಭ್ಯವಾಗುವ ವಿಶ್ವಾಸವಿದೆ’ ಎಂದು ಅವರು ಹೇಳಿದರು.</p>.<p><strong>ಉತ್ತರ ಕರ್ನಾಟಕದಲ್ಲಿ ಭಾಷಣ: </strong>ದಾಭೋಲ್ಕರ್ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿರುವ ಆರೋಪಿಯು ಉತ್ತರ ಕರ್ನಾಟಕದ ಹಲವು ನಗರಗಳಲ್ಲಿ ಭಾಷಣ ಮಾಡುತ್ತಿದ್ದರು ಎಂಬ ಮಾಹಿತಿ ತನಿಖಾಧಿಕಾರಿಗಳಿಗೆ ಸಿಕ್ಕಿದೆ.</p>.<p>‘ಹುಬ್ಬಳ್ಳಿ, ಬೆಳಗಾವಿಯಲ್ಲಿ ನಡೆಯುತ್ತಿದ್ದ ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿದ್ದ ಗುಪ್ತ ಸಭೆಗಳಿಗೆ ಆರೋಪಿ ಬಂದು ಹೋಗುತ್ತಿದ್ದರು. ಆ ಸಂಬಂಧ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಹೇಳಿಕೆಯನ್ನೂ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>ವಿಚಾರಣೆ ವೇಳೆ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿರುವ ಬಂಧನದಲ್ಲಿರುವ ಆರೋಪಿಯು ‘ಧರ್ಮದ ಏಳಿಗೆಗಾಗಿ ಭಾಷಣ ಮಾಡುತ್ತಿದ್ದೆ ಹೊರತು, ಬೇರೆ ಯಾವುದೇ ದುರುದ್ದೇಶವಿರಲಿಲ್ಲ’ ಎಂದು ಹೇಳಿರುವುದಾಗಿ ಗೊತ್ತಾಗಿದೆ.</p>.<p>ಇನ್ನೂ ಮೂರು ಪ್ರಕರಣಗಳಲ್ಲಿ ಸಾಮ್ಯತೆ ಕಂಡುಬಂದಿದ್ದರಿಂದ ಸಿಐಡಿ, ಪುಣೆಯ ಎಸ್ಐಟಿ ಹಾಗೂ ಸಿಬಿಐ ಅಧಿಕಾರಿಗಳು ಜಂಟಿಯಾಗಿ ತನಿಖೆ ಮುಂದುವರಿಸಿದ್ದಾರೆ.</p>.<p><strong>***<br /> ಕಲಬುರ್ಗಿ ಒಡನಾಡಿಗಳ ವಿಚಾರಣೆಗೆ ನಿರ್ಧಾರ: </strong>ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗದಿದ್ದರಿಂದ ಕಲಬುರ್ಗಿ ಅವರ ಒಡನಾಡಿಗಳನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಲು ಸಿಐಡಿ ನಿರ್ಧರಿಸಿರುವುದಾಗಿ ಗೊತ್ತಾಗಿದೆ.</p>.<p>ಇತ್ತೀಚೆಗೆ ಧಾರವಾಡ ಸೇರಿದಂತೆ ಕೆಲವೆಡೆ ನಡೆದಿರುವ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಂಡಿರುವ ಅಧಿಕಾರಿಗಳು, ಕಲಬುರ್ಗಿ ಅವರ ಒಡನಾಟದ ಬಗ್ಗೆ ಭಾಷಣ ಮಾಡಿದವರನ್ನು ಸಂಪರ್ಕಿಸುತ್ತಿದ್ದಾರೆ. ಅವರಿಂದ ಲಿಖಿತ ಹೇಳಿಕೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೆಲವರು ಅಧಿಕಾರಿಗಳ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ತಿಳಿದುಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>