ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ಅವರ ನೇತೃತ್ವದಲ್ಲಿ ರಚನೆಯಾಗಿದ್ದ ತಜ್ಞರ ತಂಡ ಅ.7 ಮತ್ತು 8 ರಂದು ಕರ್ನಾಟಕದ ಕೆ.ಆರ್.ಎಸ್ , ಹೇಮಾವತಿ ಜಲಾಶಯ ಮತ್ತು ಅಚ್ಚುಕಟ್ಟು ಪ್ರದೇಶಗಳಿಗೆ ಭೇಟಿ ನೀಡಿತ್ತು. ಅ.9 ಮತ್ತು 10ರಂದು ತಮಿಳುನಾಡಿನ ಭವಾನಿ, ಮೆಟ್ಟೂರು ಜಲಾಶಯ, ಅಚ್ಚುಕಟ್ಟು ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿಯ ಮಾಹಿತಿ ಸಂಗ್ರಹಿಸಿದೆ.