ಸೆ. 12, ಸೆ. 20, ಸೆ. 27 ಮತ್ತು ಸೆ. 30ರಂದು ವಿಚಾರಣೆ ನಡೆಸಿ ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದ್ದ ಕೋರ್ಟ್, ಕರ್ನಾಟಕವು ಆದೇಶ ಪಾಲನೆ ಮಾಡದ್ದರಿಂದ ವಸ್ತುಸ್ಥಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಉನ್ನತ ಮಟ್ಟದ ತಜ್ಞರ ತಂಡಕ್ಕೆ ಅಕ್ಟೋಬರ್ 4ರಂದು ಸೂಚಿಸಿತ್ತಲ್ಲದೆ, 10 ದಿನಗಳ ಕಾಲ ನಿತ್ಯ 2,000 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿತ್ತು.