ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಹಾಲಿ ಇರುವ ಪದ್ಧತಿಯಂತೆಯೇ ಆಯ್ಕೆ ಪ್ರಕ್ರಿಯೆ ನಡೆಯಲಿ. ಆದರೆ, ಇದೇ 25ರೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಮುಚ್ಚಿದ ಲಕೋಟೆಯಲ್ಲಿ ಆಯ್ಕೆ ಪಟ್ಟಿಯನ್ನು ಕೋರ್ಟ್ಗೆ ನೀಡಲಿ. ಸರ್ಕಾರ ಯಾವ ರೀತಿ ಹಾಗೂ ಯಾರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂಬುದನ್ನು ಪರಿಶೀಲಿಸೋಣ’ ಎಂದು ಹೇಳಿ ವಿಚಾರಣೆ ಮುಂದೂಡಿದರು.