ವಿದ್ಯಾರ್ಥಿಗಳ ಗಣಿತ ಕಲಿಕಾ ಆಂದೋಲನ
ಅಕ್ಷರ ಪ್ರತಿಷ್ಠಾನದ ಸಹಯೋಗದಲ್ಲಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಕಲಿಕಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಗದಗ ಹಾಗೂ ಧಾರವಾಡ ಜಿಲ್ಲೆಗಳ 1.29 ಲಕ್ಷ ಮಕ್ಕಳಿಗೆ ₹15.96 ಕೋಟಿ ವೆಚ್ಚದಲ್ಲಿ ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತನ್ವೀರ್ ಸೇಠ್ ವಿವರಿಸಿದರು.