ಕೆಲವು ಕಡೆ ಕಾಮಗಾರಿ ಆಗದೆ ಇದ್ದರೂ ಬಿಲ್ ಮಾತ್ರ ಆಗಿದೆ. ಕೆಲವು ಕಾಮಗಾರಿಗಳನ್ನು ನಿಯಮ ಮೀರಿ ಕೆಆರ್ಐಡಿಎಲ್ ಸಂಸ್ಥೆಗೆ ನೀಡಲಾಗಿದೆ. ಆ ಸಂಸ್ಥೆ ಈ ಕಾಮಗಾರಿಗಳನ್ನು ಉಪ ಗುತ್ತಿಗೆ ನೀಡಿದೆ. ಆ ಉಪ ಗುತ್ತಿಗೆ ಪಡೆದವರಲ್ಲಿ ಶಾಸಕ ಎಸ್.ಟಿ. ಸೋಮಶೇಖರ್ ಅವರ ಬೆಂಬಲಿಗರು, ರಕ್ತ ಸಂಬಂಧಿಗಳು ಸೇರಿದ್ದಾರೆ ಎಂದು ಆರೋಪಿಸಿದರು.
ಕೆ.ಆರ್.ಪುರ, ಯಶವಂತಪುರ, ಆರ್.ಆರ್.ನಗರ, ಬ್ಯಾಟರಾಯನಪುರ ಕ್ಷೇತ್ರಗಳಿಗಾಗಿ ಮೂರು ವರ್ಷಗಳಲ್ಲಿ ₹3531.83 ಕೋಟಿ ಅನುದಾನ ಬಿಡುಗಡೆಯಾಗಿದೆ. ಅಭಿವೃದ್ಧಿ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲ ಎಂದರು.
ಆಧಾರರಹಿತ ಆರೋಪ: ರಮೇಶ್ ಅವರು ಆಧಾರರಹಿತವಾಗಿ ಆರೋಪ ಮಾಡುತ್ತಿದ್ದು, ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯಿಸಿದರು.