ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃ. ಗೋಪಿನಾಥ್‌ ನಿವಾಸಕ್ಕೆ ಅಡ್ವಾಣಿ ಭೇಟಿ

Last Updated 21 ಅಕ್ಟೋಬರ್ 2016, 19:50 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತ, ತಮ್ಮ ಒಡನಾಡಿ  ಕೃ. ಗೋಪಿನಾಥ್‌ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ನಗರಕ್ಕೆ ಬಂದ ಅಡ್ವಾಣಿ ಅವರನ್ನು ಪರಿಷತ್‌ ಸದಸ್ಯ ರಾಮಚಂದ್ರಗೌಡ  ಸ್ವಾಗತಿಸಿದರು.
ಬಳಿಕ ಅವರ ಜತೆಯಲ್ಲಿ ಗೋಪಿನಾಥ್‌ ಮನೆಗೆ ತೆರಳಿದ ಅಡ್ವಾಣಿ, ಅವರ ಸೋದರರಾದ ಕೃ. ಸೂರ್ಯನಾರಾಯಣರಾವ್‌, ಕೃ. ನರಹರಿ ಅವರಿಗೆ ಸಾಂತ್ವನ ಹೇಳಿದರು.

ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅಡ್ವಾಣಿ ಅವರನ್ನು ರಾತ್ರಿ ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಶಾಸಕ ಎಸ್‌. ಸುರೇಶಕುಮಾರ್‌ ಅವರು ಕುಶಲೋಪರಿ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT