ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ದಾಳಿಯಿಂದ ಪಾರಾದ ಮಣಿಪುರ ಸಿ.ಎಂ

Last Updated 24 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಇಂಫಾಲ: ಮಣಿಪುರದ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ ಘಟನೆ ಇಲ್ಲಿನ ಉಖ್ರುಲ್ ಹೆಲಿಪ್ಯಾಡ್‌ನಲ್ಲಿ ನಡೆದಿದೆ. ಮುಖ್ಯಮಂತ್ರಿ ಹೆಲಿಕಾಪ್ಟರ್‌ನಿಂದ ಇಳಿಯುತ್ತಿದ್ದಾಗ ಗುಂಡಿನ ದಾಳಿ ನಡೆಸಲಾಗಿದೆ.

ಅವರು ದಾಳಿಯಿಂದ ಪಾರಾಗಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮಣಿಪುರ ರೈಫಲ್ಸ್ ಪಡೆಯ ಯೋಧರೊಬ್ಬರು ಗಾಯಗೊಂಡಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿ ಮತ್ತು ಕೆಲ ಸಚಿವರೂ ಮುಖ್ಯಮಂತ್ರಿ ಜತೆಗಿದ್ದರು. ಅವರೂ ದಾಳಿಯಿಂದ ಪಾರಾಗಿದ್ದಾರೆ.

ತಕ್ಷಣವೇ ಮುಖ್ಯಮಂತ್ರಿಯವರು ಅಲ್ಲಿಂದ ಚಿಂಗೈ ಹಳ್ಳಿಗೆ ತೆರಳಿದ್ದಾರೆ. ಆದರೆ, ಪ್ರತಿಭಟನೆಯ ಕಾರಣ ಕಾರ್ಯಕ್ರಮ ರದ್ದುಪಡಿಸಿ ರಾಜಧಾನಿಗೆ ವಾಪಸಾದರು. ನಂತರ ಸಚಿವ ಸಂಪುಟದ ತುರ್ತು ಸಭೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT