ಮೈಸೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮೂರು ವರ್ಷಗಳ ಅಧಿಕಾರಾವಧಿ ಮುಗಿಯಲು ಇನ್ನೂ ಎಂಟೂವರೆ ತಿಂಗಳು ಬಾಕಿ ಇರುವಾಗಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಇತರ ಕಾರ್ಯಕರ್ತರಿಗೂ ಅವಕಾಶ ಸಿಗಲಿ ಎಂಬುದು ನನ್ನ ಉದ್ದೇಶ. ಪಕ್ಷದ ಕಾರ್ಯಕರ್ತೆಯಾಗಿ ದುಡಿಯುತ್ತೇನೆ’ ಎಂದು ಹೇಳಿದರು. ಮೈಸೂರು ಮೂಲದ ಮಂಜುಳಾ ಮಾನಸ 2014ರ ಜೂನ್ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು.