ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಪುರುಷೋತ್ತಮ, ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ಪೌರಕಾರ್ಮಿಕರಿದ್ದಾರೆ. ದೇಶದಲ್ಲಿ 40 ಲಕ್ಷ ಪೌರಕಾರ್ಮಿಕರಿದ್ದಾರೆ. ಆದರೆ, ಅವರ ಸಮಸ್ಯೆಗಳು ಬಗೆಹರಿಯಬೇಕು ಎಂದು ಆಗ್ರಹಿಸಿದರು.
‘ಭಾರತೀಯರೆಲ್ಲರ ಮಹಾಬೆಳಕು ಬಾಬಾಸಾಹೇಬ್ ಅಂಬೇಡ್ಕರ್’ ಕೃತಿಯನ್ನು ಮೇಯರ್ ಬಿ.ಎಲ್.ಭೈರಪ್ಪ ಬಿಡುಗಡೆಗೊಳಿಸಿದರು. ಶಾಸಕರಾದ ಎಂ.ಕೆ.ಸೋಮಶೇಖರ್, ಮಂಜುನಾಥ್, ಉಪ ಮೇಯರ್ ಜಿ.ಎಚ್.ವನಿತಾ, ಪಾಲಿಕೆ ಆಡಳಿತ ಪಕ್ಷದ ನಾಯಕ ಜೆ.ಎಸ್.ಜಗದೀಶ್ ಇತರರು ಭಾಗವಹಿಸಿದ್ದರು. ಪಾಲಿಕೆ ಆಯುಕ್ತ ಜಿ.ಜಗದೀಶ್ ಸ್ವಾಗತಿಸಿದರು.