ಜಿ.ಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿ.ಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಎತ್ತಿದ ಪ್ರಶ್ನೆಗೆ ಅವರು ಉತ್ತರಿಸಿದರು. ‘ಈ ವರ್ಷ ಕೇವಲ ಶೇ 57 ಮಳೆಯಾಗಿದ್ದು, ಶೇ 43ರಷ್ಟು ಕೊರತೆ ಉಂಟಾಗಿದೆ. ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ಶೇ 80ರಷ್ಟು ಮಳೆ ಆಗಬೇಕಿತ್ತು. ಆದರೆ, ತುಂಬಾ ಕೊರತೆ ಉಂಟಾಗಿದೆ. 1.21 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಪರಿಹಾರ ಕೋರಿ ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿದೆ’ ಎಂದರು.