ಉಡುಪಿ: ಕೋಟೇಶ್ವರದ ಎನ್.ಆರ್.ಎ.ಎಂ.ಎಚ್. ಪ್ರಕಾಶನ ದಿ. ಪಾಂಡೇಶ್ವರ ಸೂರ್ಯನಾರಾಯಣ ಚಡಗರ ನೆನಪಿನಲ್ಲಿ ಕೊಡುವ ಚಡಗ ಸ್ಮಾರಕ 2016ನೇ ಸಾಲಿನ ಶ್ರೇಷ್ಠ ಕಾದಂಬರಿ ಪ್ರಶಸ್ತಿಗೆ ಮೈಸೂರಿನ ಲೇಖಕಿ ವಸುಮತಿ ಉಡುಪ ಅವರು ಬರೆದ ‘ಮನ್ವಂತರ’ ಕಾದಂಬರಿ ಆಯ್ಕೆಯಾಗಿದೆ. ಪ್ರಶಸ್ತಿಯು ₹ 10 ಸಾವಿರ, ಶಾಲು, ಪ್ರಶಸ್ತಿ ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ.