ಹಾವೇರಿ: ಶ್ರೀ ಗಳಗನಾಥ ಮತ್ತು ನಾ. ಶ್ರೀ ರಾಜಪುರೋಹಿತ ಪ್ರತಿಷ್ಠಾನದ ಈ ಸಾಲಿನ ‘ಶ್ರೀ ಗಳಗನಾಥ’ ಪ್ರಶಸ್ತಿಗೆ ಕಾರ್ಕಳ ತಾಲ್ಲೂಕಿನ ಕಾಂತಾವರದ ಡಾ. ನಾ. ಮೊಗಸಾಲೆ ಹಾಗೂ ‘ನಾ. ಶ್ರೀ. ರಾಜಪುರೋಹಿತ’ ಪ್ರಶಸ್ತಿಗೆ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀನಿವಾಸ ವಿ. ಪಾಡಿಗಾರ ಆಯ್ಕೆಯಾಗಿದ್ದಾರೆ.
‘ಪ್ರತಿಷ್ಠಾನವು ಇದೇ ಮೊದಲ ಬಾರಿ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿಗಳು ತಲಾ ₹ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕನ್ನಡ ಸಾಹಿತ್ಯ, ಇತಿಹಾಸ ಮತ್ತು ಸಂಶೋಧನೆಯಲ್ಲಿ ಸಾಧನೆ ಮಾಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ನವೆಂಬರ್ 27 ರಂದು ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ದುಷ್ಯಂತ ನಾಡಗೌಡ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.