<p><strong>ಬೆಳಗಾವಿ: </strong>ಇಲ್ಲಿನ ಶಹಾಪುರದಲ್ಲಿರುವ ಹಿರಿಯ ಕನ್ನಡ ಪ್ರಾಥಮಿಕ ಸರ್ಕಾರಿ ಶಾಲೆ ನಂ.17ರ ಕೊಠಡಿಯೊಂದಕ್ಕೆ ಕಿಡಿಗೇಡಿಗಳು ಭಾನುವಾರ ಮಧ್ಯರಾತ್ರಿ ಬೆಂಕಿ ಹಚ್ಚಿದ ಘಟನೆ ನಡೆದಿದೆ.</p>.<p>ಕೊಠಡಿಯೊಳಗೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿದ್ದ ಪುಸ್ತಕ, ದಾಖಲೆ ಪತ್ರಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಝಳಕ್ಕೆ ಗೋಡೆ, ಕಿಟಕಿ, ಬಾಗಿಲು ಕರಕಲಾಗಿವೆ.</p>.<p>ಶಹಾಪುರ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಹೊಂದಿಕೊಂಡಂತೆ ಶಾಲೆ ಇದ್ದರೂ ಈ ಘಟನೆ ಪೊಲೀಸರ ಗಮನಕ್ಕೆ ಬಂದಿರಲಿಲ್ಲ. ಸೋಮವಾರ ಬೆಳಿಗ್ಗೆ ಶಿಕ್ಷಕರು ಶಾಲೆಗೆ ಬಂದ ನಂತರವಷ್ಟೇ ಪ್ರಕರಣ ಬೆಳಕಿಗೆ ಬಂದಿದೆ. ನಗರ ವಲಯ ಬಿಇಓ ಬಸವರಾಜ ನಾಲತವಾಡ, ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಶಾಲೆಯ 7ನೇ ತರಗತಿಯ ಕೊಠಡಿಯೊಳಗೆ ರಾತ್ರಿ ನುಗ್ಗಿದ ಕಿಡಿಗೇಡಿಗಳು ಅಲ್ಲಿದ್ದ ಪಠ್ಯಪುಸ್ತಕಗಳು, ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ, ಆರೋಗ್ಯ ತಪಾಸಣೆ ಕಾರ್ಡ್, ಪ್ರಾಜೆಕ್ಟ್ ವರದಿಗಳಿಗೆ ಬೆಂಕಿ ಹಚ್ಚಿ, ಸುಟ್ಟುಹಾಕಿದ್ದಾರೆ’ ಎಂದು ಮುಖ್ಯ ಅಧ್ಯಾಪಕಿ ಶೈಲಜಾ ಕುಕನೂರ ತಿಳಿಸಿದರು.</p>.<p>‘ದುಷ್ಕರ್ಮಿಗಳು ಯಾರು? ಶಾಲೆಯೊಳಗೆ ಹೇಗೆ ಪ್ರವೇಶಿಸಿದರು? ಯಾವುದಾದರೂ ದಾಖಲೆಗಳನ್ನು ಹೊತ್ತೊಯ್ದಿದ್ದಾರೆಯೇ? ಮುಂತಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ತನಿಖೆ ಪೂರ್ಣಗೊಳಿಸಿದ ನಂತರ ವಿವರ ನೀಡಲಾಗುವುದು’ ಎಂದು ಸಿಪಿಐ ಡಿ.ಸಿ. ಲಕ್ಕನ್ನವರ ಸುದ್ದಿಗಾರರಿಗೆ ತಿಳಿಸಿದರು.</p>.<p><strong>ಮರಾಠಿಗರ ಪ್ರಾಬಲ್ಯ:</strong> ‘ಮರಾಠಿಗರ ಪ್ರಾಬಲ್ಯ ಹೆಚ್ಚಾಗಿರುವ ಈ ಪ್ರದೇಶದಲ್ಲಿ 1967ರಲ್ಲಿ ಈ ಶಾಲೆ ಆರಂಭಗೊಂಡಿತ್ತು. ಅಂದಿನಿಂದಲೂ ಒಂದಿಲ್ಲೊಂದು ರೀತಿಯಲ್ಲಿ ಶಾಲೆಯ ಆಸ್ತಿಪಾಸ್ತಿಗೆ ದುಷ್ಕರ್ಮಿಗಳು ಹಾನಿ ಉಂಟು ಮಾಡುತ್ತಿದ್ದಾರೆ. ಇದರ ಬಗ್ಗೆ ಹಲವು ಬಾರಿ ಪೊಲೀಸರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ಶಾಲಾ ಸಿಬ್ಬಂದಿಯೊಬ್ಬರು ತಿಳಿಸಿದರು.</p>.<p><strong>‘ಎಂ.ಇ.ಎಸ್ ಹಾವಳಿ ಹೆಚ್ಚಾಗಿದೆ’ (ಹಾವೇರಿ ವರದಿ): </strong>‘ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂ.ಇ.ಎಸ್) ಪುಂಡರ ಹಾವಳಿ ಹೆಚ್ಚಾಗಿದ್ದು, ರಾಜ್ಯದ ಆಡಳಿತ ವ್ಯವಸ್ಥೆಗೆ ಮಾರಕವಾಗಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಮರಾಠಿ, ತಮಿಳು, ತೆಲುಗು, ಉರ್ದು ಶಾಲೆಗಳು ಇದ್ದು, ಕನ್ನಡಿಗರು ಸಹ ಇದೇ ರೀತಿ ದಾಳಿ ಮಾಡಿದರೆ ರಾಜ್ಯದ ಏಕತೆಗೆ ಧಕ್ಕೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಎಂ.ಇ.ಎಸ್ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ಶಹಾಪುರದಲ್ಲಿರುವ ಹಿರಿಯ ಕನ್ನಡ ಪ್ರಾಥಮಿಕ ಸರ್ಕಾರಿ ಶಾಲೆ ನಂ.17ರ ಕೊಠಡಿಯೊಂದಕ್ಕೆ ಕಿಡಿಗೇಡಿಗಳು ಭಾನುವಾರ ಮಧ್ಯರಾತ್ರಿ ಬೆಂಕಿ ಹಚ್ಚಿದ ಘಟನೆ ನಡೆದಿದೆ.</p>.<p>ಕೊಠಡಿಯೊಳಗೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿದ್ದ ಪುಸ್ತಕ, ದಾಖಲೆ ಪತ್ರಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಝಳಕ್ಕೆ ಗೋಡೆ, ಕಿಟಕಿ, ಬಾಗಿಲು ಕರಕಲಾಗಿವೆ.</p>.<p>ಶಹಾಪುರ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಹೊಂದಿಕೊಂಡಂತೆ ಶಾಲೆ ಇದ್ದರೂ ಈ ಘಟನೆ ಪೊಲೀಸರ ಗಮನಕ್ಕೆ ಬಂದಿರಲಿಲ್ಲ. ಸೋಮವಾರ ಬೆಳಿಗ್ಗೆ ಶಿಕ್ಷಕರು ಶಾಲೆಗೆ ಬಂದ ನಂತರವಷ್ಟೇ ಪ್ರಕರಣ ಬೆಳಕಿಗೆ ಬಂದಿದೆ. ನಗರ ವಲಯ ಬಿಇಓ ಬಸವರಾಜ ನಾಲತವಾಡ, ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಶಾಲೆಯ 7ನೇ ತರಗತಿಯ ಕೊಠಡಿಯೊಳಗೆ ರಾತ್ರಿ ನುಗ್ಗಿದ ಕಿಡಿಗೇಡಿಗಳು ಅಲ್ಲಿದ್ದ ಪಠ್ಯಪುಸ್ತಕಗಳು, ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ, ಆರೋಗ್ಯ ತಪಾಸಣೆ ಕಾರ್ಡ್, ಪ್ರಾಜೆಕ್ಟ್ ವರದಿಗಳಿಗೆ ಬೆಂಕಿ ಹಚ್ಚಿ, ಸುಟ್ಟುಹಾಕಿದ್ದಾರೆ’ ಎಂದು ಮುಖ್ಯ ಅಧ್ಯಾಪಕಿ ಶೈಲಜಾ ಕುಕನೂರ ತಿಳಿಸಿದರು.</p>.<p>‘ದುಷ್ಕರ್ಮಿಗಳು ಯಾರು? ಶಾಲೆಯೊಳಗೆ ಹೇಗೆ ಪ್ರವೇಶಿಸಿದರು? ಯಾವುದಾದರೂ ದಾಖಲೆಗಳನ್ನು ಹೊತ್ತೊಯ್ದಿದ್ದಾರೆಯೇ? ಮುಂತಾದ ಅಂಶಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ತನಿಖೆ ಪೂರ್ಣಗೊಳಿಸಿದ ನಂತರ ವಿವರ ನೀಡಲಾಗುವುದು’ ಎಂದು ಸಿಪಿಐ ಡಿ.ಸಿ. ಲಕ್ಕನ್ನವರ ಸುದ್ದಿಗಾರರಿಗೆ ತಿಳಿಸಿದರು.</p>.<p><strong>ಮರಾಠಿಗರ ಪ್ರಾಬಲ್ಯ:</strong> ‘ಮರಾಠಿಗರ ಪ್ರಾಬಲ್ಯ ಹೆಚ್ಚಾಗಿರುವ ಈ ಪ್ರದೇಶದಲ್ಲಿ 1967ರಲ್ಲಿ ಈ ಶಾಲೆ ಆರಂಭಗೊಂಡಿತ್ತು. ಅಂದಿನಿಂದಲೂ ಒಂದಿಲ್ಲೊಂದು ರೀತಿಯಲ್ಲಿ ಶಾಲೆಯ ಆಸ್ತಿಪಾಸ್ತಿಗೆ ದುಷ್ಕರ್ಮಿಗಳು ಹಾನಿ ಉಂಟು ಮಾಡುತ್ತಿದ್ದಾರೆ. ಇದರ ಬಗ್ಗೆ ಹಲವು ಬಾರಿ ಪೊಲೀಸರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ಶಾಲಾ ಸಿಬ್ಬಂದಿಯೊಬ್ಬರು ತಿಳಿಸಿದರು.</p>.<p><strong>‘ಎಂ.ಇ.ಎಸ್ ಹಾವಳಿ ಹೆಚ್ಚಾಗಿದೆ’ (ಹಾವೇರಿ ವರದಿ): </strong>‘ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂ.ಇ.ಎಸ್) ಪುಂಡರ ಹಾವಳಿ ಹೆಚ್ಚಾಗಿದ್ದು, ರಾಜ್ಯದ ಆಡಳಿತ ವ್ಯವಸ್ಥೆಗೆ ಮಾರಕವಾಗಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಮರಾಠಿ, ತಮಿಳು, ತೆಲುಗು, ಉರ್ದು ಶಾಲೆಗಳು ಇದ್ದು, ಕನ್ನಡಿಗರು ಸಹ ಇದೇ ರೀತಿ ದಾಳಿ ಮಾಡಿದರೆ ರಾಜ್ಯದ ಏಕತೆಗೆ ಧಕ್ಕೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಎಂ.ಇ.ಎಸ್ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>