ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಪಿಎಸ್ಸಿಯ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆ ಮಂಡಿಸಲಾಯಿತು. ಸುದೀರ್ಘ ಚರ್ಚೆಯ ಬಳಿಕ ಎರಡು ಮಹತ್ವದ ನಿರ್ಣಯಗಳನ್ನು ಸಭೆ ಕೈಗೊಂಡಿತು ಎಂದೂ ಅವರು ಹೇಳಿದರು.
ಸಂದರ್ಶನ ಮಂಡಳಿಯಲ್ಲಿರುವ ನಾಲ್ಕು ಸದಸ್ಯರು ನೀಡುವ ಒಟ್ಟು ಮೊತ್ತವನ್ನು ಕೂಡಿ, ಸರಾಸರಿ ಅಂಕವನ್ನು ಕಂಡು ಹಿಡಿದು ಸಂದರ್ಶನ ಎದುರಿಸಿದ ಅಭ್ಯರ್ಥಿಗೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿತು ಎಂದರು.