ಯೋಜನೆಗಾಗಿ ಒಟ್ಟು 13.90 ಹೆಕ್ಟೆರ್ ಅರಣ್ಯ ಭೂಮಿ ಉಪಯೋಗಿ ಸುತ್ತಿದ್ದು, 4,995 ಮರಗಳನ್ನು ಕಡಿಯುವ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ತಿಳಿಸುತ್ತಿದ್ದಂತೆಯೇ, ‘ಯೋಜನೆ ಗಾಗಿ ಈಗಾಗಲೇ ಒಟ್ಟು 2,700 ಮರ ಕಡಿಯಲಾಗಿದೆ. ಅದಕ್ಕೆ ಬದಲಾಗಿ ಸಸಿ ನೆಡುವ ಕುರಿತು ಯೋಚಿಸಲಾಗಿದೆಯೇ’ ಎಂದು ನ್ಯಾಯಮೂರ್ತಿಯವರು ಪ್ರಶ್ನಿಸಿ ದರು. ಮರಗಳನ್ನು ಕಡಿದಿರುವುದಕ್ಕೆ ಪ್ರತಿಯಾಗಿ ಪರ್ಯಾಯ ಜಾಗದಲ್ಲಿ ಅದ ಕ್ಕಿಂತ 10ಕ್ಕೂ ಹೆಚ್ಚು ಪಟ್ಟು ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಅವರು ತಿಳಿಸಿದರು.