<p><strong>ನವದೆಹಲಿ: </strong>‘ಸೂಕ್ತ ಮುಂದಾಲೋಚನೆ ಇಲ್ಲದೆ ನೋಟು ರದ್ದು ಮಾಡಿದ ಹಣಕಾಸು ಇಲಾಖೆಯ ಕ್ರಮ ಸರಿಯಲ್ಲ’ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ.</p>.<p>‘ನೋಟು ರದ್ದತಿಯಿಂದ ಮುಂದಾಗುವ ಅನನುಕೂಲಗಳ ಬಗ್ಗೆ ಹಣಕಾಸು ಇಲಾಖೆ ಯೋಚಿಸಬೇಕಿತ್ತು. ಯೋಜಿತ ರೀತಿಯಲ್ಲಿ ಹೆಚ್ಚುವರಿ ಎಟಿಎಂ ಯಂತ್ರಗಳನ್ನು ಅಳವಡಿಸಬೇಕಿತ್ತು. ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಎಟಿಎಂ ಯಂತ್ರಗಳನ್ನು ಸ್ಥಾಪಿಸಬೇಕಿತ್ತು’ ಎಂದು ಸ್ವಾಮಿ ಹೇಳಿದ್ದಾರೆ ಎಂದು ‘ಸೌತ್ ಚೀನಾ ಮಾರ್ನಿಂಗ್ ಪೋಸ್ಟ್’ ವರದಿ ಮಾಡಿದೆ.</p>.<p>‘ಹಣಕಾಸು ಇಲಾಖೆಯು ಯಾವುದೇ ರೀತಿಯಲ್ಲಿ ಸಮರ್ಥನೆ ಮಾಡಿಕೊಳ್ಳಬಹುದು. ಆದರೆ, ಆ ಸಮರ್ಥನೆಗಳು ಕ್ಷಮಾರ್ಹವಲ್ಲ’ ಎಂದು ಸ್ವಾಮಿ ತಿಳಿಸಿದ್ದಾರೆ.</p>.<p>ಭ್ರಷ್ಟಾಚಾರ ನಿಗ್ರಹಕ್ಕೆ ಭಾರತದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚೀನಾದ ಫಾರಿನ್ ಕರೆಸ್ಪಾಂಡೆನ್ಟ್ಸ್ ಕ್ಲಬ್ನಲ್ಲಿ ವಿಶೇಷ ಉಪನ್ಯಾಸ ನೀಡಲು ತೆರಳಿರುವ ಸ್ವಾಮಿ ಹಾಂಗ್ಕಾಂಗ್ನಲ್ಲಿ ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಸೂಕ್ತ ಮುಂದಾಲೋಚನೆ ಇಲ್ಲದೆ ನೋಟು ರದ್ದು ಮಾಡಿದ ಹಣಕಾಸು ಇಲಾಖೆಯ ಕ್ರಮ ಸರಿಯಲ್ಲ’ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ.</p>.<p>‘ನೋಟು ರದ್ದತಿಯಿಂದ ಮುಂದಾಗುವ ಅನನುಕೂಲಗಳ ಬಗ್ಗೆ ಹಣಕಾಸು ಇಲಾಖೆ ಯೋಚಿಸಬೇಕಿತ್ತು. ಯೋಜಿತ ರೀತಿಯಲ್ಲಿ ಹೆಚ್ಚುವರಿ ಎಟಿಎಂ ಯಂತ್ರಗಳನ್ನು ಅಳವಡಿಸಬೇಕಿತ್ತು. ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಎಟಿಎಂ ಯಂತ್ರಗಳನ್ನು ಸ್ಥಾಪಿಸಬೇಕಿತ್ತು’ ಎಂದು ಸ್ವಾಮಿ ಹೇಳಿದ್ದಾರೆ ಎಂದು ‘ಸೌತ್ ಚೀನಾ ಮಾರ್ನಿಂಗ್ ಪೋಸ್ಟ್’ ವರದಿ ಮಾಡಿದೆ.</p>.<p>‘ಹಣಕಾಸು ಇಲಾಖೆಯು ಯಾವುದೇ ರೀತಿಯಲ್ಲಿ ಸಮರ್ಥನೆ ಮಾಡಿಕೊಳ್ಳಬಹುದು. ಆದರೆ, ಆ ಸಮರ್ಥನೆಗಳು ಕ್ಷಮಾರ್ಹವಲ್ಲ’ ಎಂದು ಸ್ವಾಮಿ ತಿಳಿಸಿದ್ದಾರೆ.</p>.<p>ಭ್ರಷ್ಟಾಚಾರ ನಿಗ್ರಹಕ್ಕೆ ಭಾರತದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚೀನಾದ ಫಾರಿನ್ ಕರೆಸ್ಪಾಂಡೆನ್ಟ್ಸ್ ಕ್ಲಬ್ನಲ್ಲಿ ವಿಶೇಷ ಉಪನ್ಯಾಸ ನೀಡಲು ತೆರಳಿರುವ ಸ್ವಾಮಿ ಹಾಂಗ್ಕಾಂಗ್ನಲ್ಲಿ ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>