<p><strong>ಗುಡಿಬಂಡೆ:</strong> ₹ 500 ಮತ್ತು ₹ 1 ಸಾವಿರ ಮುಖಬೆಲೆಯ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲು ಬಂದು ಹಣ ಕಳೆದುಕೊಂಡಿದ್ದ ಚೆಂಡೂರು ಗ್ರಾಮದ ಮಹಿಳೆ ಜಂಗಾಲಪಲ್ಲಿ ಈಶ್ವರಮ್ಮ (43) ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಣ ಕಳೆದುಕೊಂಡ ಮಾನಸಿಕ ವೇದನೆಯೇ ಸಾವಿಗೆ ಕಾರಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.<br /> <br /> ಘಟನೆ ವಿವರ: ಈಶ್ವರಮ್ಮ ಅವರು ಆಶ್ರಯ ಯೋಜನೆಯ ಫಲಾನುಭವಿ. ಇತ್ತೀಚೆಗೆ ಯೋಜನೆಯ ಮೊದಲ ಕಂತಾಗಿ ₹ 15 ಸಾವಿರದ ಚೆಕ್ ನೀಡಲಾಗಿತ್ತು. ಚೆಕ್ ಡ್ರಾ ಮಾಡಿದ್ದ ಅವರು ಹಣವನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ₹ 500 ಮತ್ತು ₹ 1 ಸಾವಿರ ಮುಖ ಬೆಲೆಯ ನೋಟುಗಳು ಸ್ಥಗಿತವಾದ ಕಾರಣ ಅವುಗಳನ್ನು ಖಾತೆಗೆ ಜಮಾ ಮಾಡಲು ಶುಕ್ರವಾರ (ನ.11) ಪಟ್ಟಣದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ಗೆ ಬಂದಿದ್ದರು.<br /> <br /> ಹಣ ಜಮೆಗೆ ಚಲನ್ ಬರೆದುಕೊಡುವಂತೆ ಅಲ್ಲಿದ್ದವರಲ್ಲಿ ಒಬ್ಬರನ್ನು ಕೇಳಿದ್ದಾರೆ. ಈ ನಡುವೆಯೇ ಅವರು ಟೇಬಲ್ ಮೇಲೆ ಇಟ್ಟಿದ್ದ ಹಣದ ಗಂಟು ಕಾಣೆಯಾಗಿದೆ. ಇದರಿಂದ ನೊಂದ ಈಶ್ವರಮ್ಮ ತಮ್ಮ ಸ್ವಗ್ರಾಮಕ್ಕೆ ಮರಳಿದ್ದರು.<br /> <br /> ‘ಹಣವನ್ನು ಕಳೆದುಕೊಂಡಿದ್ದರಿಂದ ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದರು. 6 ತಿಂಗಳ ಹಿಂದೆ ಅವರ ಗುಡಿಸಲು ಬೆಂಕಿಗೆ ಆಹುತಿಯಾಗಿತ್ತು. ಈ ಎರಡೂ ಘಟನೆಗಳಿಂದ ನೊಂದಿದ್ದರು. ಇದರಿಂದ ಹೃದಯಾಘಾತವಾಗಿದೆ’ ಎನ್ನುವರು ಗ್ರಾಮಸ್ಥರು.<br /> <br /> ‘ಹಣ ಕಳೆದುಕೊಂಡಿರುವ ಬಗ್ಗೆ ಲಿಖಿತ ಹಾಗೂ ಮೌಖಿಕ ದೂರು ಬಂದಿಲ್ಲ. ಬ್ಯಾಂಕಿನಲ್ಲಿ ಸಿಸಿ ಟಿವಿ ಕ್ಯಾಮೆರಾ ಇಲ್ಲ’ ಎಂದು ಬ್ಯಾಂಕಿನ ಅಧಿಕಾರಿಗಳು ಉತ್ತರಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ₹ 500 ಮತ್ತು ₹ 1 ಸಾವಿರ ಮುಖಬೆಲೆಯ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲು ಬಂದು ಹಣ ಕಳೆದುಕೊಂಡಿದ್ದ ಚೆಂಡೂರು ಗ್ರಾಮದ ಮಹಿಳೆ ಜಂಗಾಲಪಲ್ಲಿ ಈಶ್ವರಮ್ಮ (43) ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಣ ಕಳೆದುಕೊಂಡ ಮಾನಸಿಕ ವೇದನೆಯೇ ಸಾವಿಗೆ ಕಾರಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.<br /> <br /> ಘಟನೆ ವಿವರ: ಈಶ್ವರಮ್ಮ ಅವರು ಆಶ್ರಯ ಯೋಜನೆಯ ಫಲಾನುಭವಿ. ಇತ್ತೀಚೆಗೆ ಯೋಜನೆಯ ಮೊದಲ ಕಂತಾಗಿ ₹ 15 ಸಾವಿರದ ಚೆಕ್ ನೀಡಲಾಗಿತ್ತು. ಚೆಕ್ ಡ್ರಾ ಮಾಡಿದ್ದ ಅವರು ಹಣವನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ₹ 500 ಮತ್ತು ₹ 1 ಸಾವಿರ ಮುಖ ಬೆಲೆಯ ನೋಟುಗಳು ಸ್ಥಗಿತವಾದ ಕಾರಣ ಅವುಗಳನ್ನು ಖಾತೆಗೆ ಜಮಾ ಮಾಡಲು ಶುಕ್ರವಾರ (ನ.11) ಪಟ್ಟಣದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ಗೆ ಬಂದಿದ್ದರು.<br /> <br /> ಹಣ ಜಮೆಗೆ ಚಲನ್ ಬರೆದುಕೊಡುವಂತೆ ಅಲ್ಲಿದ್ದವರಲ್ಲಿ ಒಬ್ಬರನ್ನು ಕೇಳಿದ್ದಾರೆ. ಈ ನಡುವೆಯೇ ಅವರು ಟೇಬಲ್ ಮೇಲೆ ಇಟ್ಟಿದ್ದ ಹಣದ ಗಂಟು ಕಾಣೆಯಾಗಿದೆ. ಇದರಿಂದ ನೊಂದ ಈಶ್ವರಮ್ಮ ತಮ್ಮ ಸ್ವಗ್ರಾಮಕ್ಕೆ ಮರಳಿದ್ದರು.<br /> <br /> ‘ಹಣವನ್ನು ಕಳೆದುಕೊಂಡಿದ್ದರಿಂದ ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದರು. 6 ತಿಂಗಳ ಹಿಂದೆ ಅವರ ಗುಡಿಸಲು ಬೆಂಕಿಗೆ ಆಹುತಿಯಾಗಿತ್ತು. ಈ ಎರಡೂ ಘಟನೆಗಳಿಂದ ನೊಂದಿದ್ದರು. ಇದರಿಂದ ಹೃದಯಾಘಾತವಾಗಿದೆ’ ಎನ್ನುವರು ಗ್ರಾಮಸ್ಥರು.<br /> <br /> ‘ಹಣ ಕಳೆದುಕೊಂಡಿರುವ ಬಗ್ಗೆ ಲಿಖಿತ ಹಾಗೂ ಮೌಖಿಕ ದೂರು ಬಂದಿಲ್ಲ. ಬ್ಯಾಂಕಿನಲ್ಲಿ ಸಿಸಿ ಟಿವಿ ಕ್ಯಾಮೆರಾ ಇಲ್ಲ’ ಎಂದು ಬ್ಯಾಂಕಿನ ಅಧಿಕಾರಿಗಳು ಉತ್ತರಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>