ಬೆಂಗಳೂರು: ಪ್ಯಾರಾಲಿಂಪಿಯನ್ನಲ್ಲಿ ತೋರಿದ ಅಸಾಧಾರಣ ಸಾಧನೆಗಾಗಿ ಸೋಮವಾರ ದೆಹಲಿಯಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಂದ ರಾಷ್ಟ್ರೀಯ ಮಕ್ಕಳ ಪುರಸ್ಕಾರ ಹಾಗೂ ಚಿನ್ನದ ಪದಕ ಪಡೆದಿರುವ ದಾವಣಗೆರೆಯ ಪ್ಯಾರಾಲಿಂಪಿಯನ್ ಈಜುಪಟು ರೇವತಿ ಎಂ. ನಾಯಕ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.