<p><strong>ನವದೆಹಲಿ:</strong> ನೋಟು ಬದಲಾವಣೆಯ ಮಿತಿಯನ್ನು ₹4,500ರಿಂದ ₹2,000ಕ್ಕೆ ಇಳಿಸಿರುವ ಕೇಂದ್ರ ಸರ್ಕಾರ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ನೋಟು ಬದಲಾವಣೆಯ ಮಿತಿಯನ್ನು ₹2,000ಕ್ಕೆ ಇಳಿಸಿದ್ದು ಯಾಕೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು.</p>.<p>ಈ ರೀತಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವುದು ಯಾಕೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಅದೇ ವೇಳೆ ಜನರ ಸಮಸ್ಯೆಗಳನ್ನು ನಿವಾರಿಸಲು ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.</p>.<p>ಒಬ್ಬ ವ್ಯಕ್ತಿ ದಿನವೊಂದಕ್ಕೆ ಬದಲಾವಣೆ ಮಾಡಬಹುದಾದ ಹಣದ ಮಿತಿಯನ್ನು ₹4,500 ರಿಂದ ₹2,000ಕ್ಕೆ ಇಳಿಸಿ ಗುರುವಾರ ಕೇಂದ್ರ ಆದೇಶ ಹೊರಸಿತ್ತು. ಈ ಆದೇಶ ಶುಕ್ರವಾರದಿಂದ ಜಾರಿಗೆ ಬಂದಿದೆ.</p>.<p>ಏತನ್ಮಧ್ಯೆ, ನೋಟು ರದ್ದು ತೀರ್ಮಾನದ ವಿರುದ್ಧ ವಿವಿಧ ಹೈಕೋರ್ಟ್ಗಳಲ್ಲಿ ಮತ್ತು ಇತರ ನ್ಯಾಯಾಲಯಗಳಲ್ಲಿ ಸಲ್ಲಿಸಲ್ಪಟ್ಟ ಅರ್ಜಿಗಳಿಗೆ ತಡೆ ನೀಡಿಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.</p>.<p>ಕೇಂದ್ರ ಸರ್ಕಾರ ನೋಟು ರದ್ದು ಮಾಡಿರುವ ತೀರ್ಮಾನದಿಂದ ಜನರು ಕಂಗಾಲಾಗಿದ್ದಾರೆ. ಆದ ಕಾರಣ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಈ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೋಟು ಬದಲಾವಣೆಯ ಮಿತಿಯನ್ನು ₹4,500ರಿಂದ ₹2,000ಕ್ಕೆ ಇಳಿಸಿರುವ ಕೇಂದ್ರ ಸರ್ಕಾರ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ನೋಟು ಬದಲಾವಣೆಯ ಮಿತಿಯನ್ನು ₹2,000ಕ್ಕೆ ಇಳಿಸಿದ್ದು ಯಾಕೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು.</p>.<p>ಈ ರೀತಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಜನರಿಗೆ ಇನ್ನಷ್ಟು ತೊಂದರೆ ನೀಡುತ್ತಿರುವುದು ಯಾಕೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಅದೇ ವೇಳೆ ಜನರ ಸಮಸ್ಯೆಗಳನ್ನು ನಿವಾರಿಸಲು ಶೀಘ್ರವೇ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.</p>.<p>ಒಬ್ಬ ವ್ಯಕ್ತಿ ದಿನವೊಂದಕ್ಕೆ ಬದಲಾವಣೆ ಮಾಡಬಹುದಾದ ಹಣದ ಮಿತಿಯನ್ನು ₹4,500 ರಿಂದ ₹2,000ಕ್ಕೆ ಇಳಿಸಿ ಗುರುವಾರ ಕೇಂದ್ರ ಆದೇಶ ಹೊರಸಿತ್ತು. ಈ ಆದೇಶ ಶುಕ್ರವಾರದಿಂದ ಜಾರಿಗೆ ಬಂದಿದೆ.</p>.<p>ಏತನ್ಮಧ್ಯೆ, ನೋಟು ರದ್ದು ತೀರ್ಮಾನದ ವಿರುದ್ಧ ವಿವಿಧ ಹೈಕೋರ್ಟ್ಗಳಲ್ಲಿ ಮತ್ತು ಇತರ ನ್ಯಾಯಾಲಯಗಳಲ್ಲಿ ಸಲ್ಲಿಸಲ್ಪಟ್ಟ ಅರ್ಜಿಗಳಿಗೆ ತಡೆ ನೀಡಿಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.</p>.<p>ಕೇಂದ್ರ ಸರ್ಕಾರ ನೋಟು ರದ್ದು ಮಾಡಿರುವ ತೀರ್ಮಾನದಿಂದ ಜನರು ಕಂಗಾಲಾಗಿದ್ದಾರೆ. ಆದ ಕಾರಣ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಈ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>