<p><strong>ಹೊಸಪೇಟೆ: </strong>ಹಣ ಜಮಾ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಬ್ಯಾಂಕ್ನಲ್ಲೇ ಮೃತಪಟ್ಟ ಘಟನೆ ಗುರುವಾರ ನಗರದಲ್ಲಿ ನಡೆದಿದೆ.</p>.<p>ನಗರದ ಟಿ.ಬಿ. ಡ್ಯಾಂ ಹಳೆ ಅಮರಾವತಿ ನಿವಾಸಿ ಅಯ್ಯನಗೌಡರ ಶೇಖರಗೌಡ (67) ಮಾರ್ಕಂಡೇಶ್ವರ ಕಲ್ಯಾಣ ಮಂಟಪದಲ್ಲಿ ವ್ಯವಸ್ಥಾಪಕರಾಗಿದ್ದರು.</p>.<p>ಟಿ.ಬಿ. ಡ್ಯಾಂ ರಸ್ತೆಯಲ್ಲಿರುವ ಪ್ರಗತಿ ಗ್ರಾಮೀಣ ಬ್ಯಾಂಕ್ ಶಾಖೆಗೆ ಹಣ ಜಮಾ ಮಾಡಲು ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಹೋಗಿದ್ದರು.</p>.<p>ತಿಂಗಳ ಮೊದಲ ದಿನವಾದ್ದರಿಂದ ಬ್ಯಾಂಕ್ನಲ್ಲಿ ಉದ್ದನೆಯ ಸಾಲು ಇತ್ತು. ಬಹಳ ಹೊತ್ತು ಸಾಲಿನಲ್ಲಿ ನಿಂತಿದ್ದರಿಂದ ಅಯಾಸಗೊಂಡ ಅವರು ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟರು. ಈ ಹಿಂದೆಯೂ ಅವರಿಗೆ ಹೃದಯಾಘಾತವಾಗಿತ್ತು ಎಂದು ಅವರ ಅಳಿಯ ಬಸವರಾಜ ತಿಳಿಸಿದರು. ಅಯ್ಯನಗೌಡರ ಅವರಿಗೆ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.<br /> <br /> ಗ್ರಾಹಕರು ಹೇಳುವ ಪ್ರಕಾರ ಅಯ್ಯನಗೌಡರ ಅವರು ಅಯಾಸಗೊಂಡು ಬ್ಯಾಂಕಿನ ಬೆಂಚಿನ ಮೇಲೆ ಕುಳಿತಿದ್ದರು. ಈ ವೇಳೆ ಪ್ರಾಣ ಹೋಗಿದೆ</p>.<p><strong>-ತಿಮ್ಮಾರೆಡ್ಡಿ</strong><br /> ವ್ಯವಸ್ಥಾಪಕ, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಹಣ ಜಮಾ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಬ್ಯಾಂಕ್ನಲ್ಲೇ ಮೃತಪಟ್ಟ ಘಟನೆ ಗುರುವಾರ ನಗರದಲ್ಲಿ ನಡೆದಿದೆ.</p>.<p>ನಗರದ ಟಿ.ಬಿ. ಡ್ಯಾಂ ಹಳೆ ಅಮರಾವತಿ ನಿವಾಸಿ ಅಯ್ಯನಗೌಡರ ಶೇಖರಗೌಡ (67) ಮಾರ್ಕಂಡೇಶ್ವರ ಕಲ್ಯಾಣ ಮಂಟಪದಲ್ಲಿ ವ್ಯವಸ್ಥಾಪಕರಾಗಿದ್ದರು.</p>.<p>ಟಿ.ಬಿ. ಡ್ಯಾಂ ರಸ್ತೆಯಲ್ಲಿರುವ ಪ್ರಗತಿ ಗ್ರಾಮೀಣ ಬ್ಯಾಂಕ್ ಶಾಖೆಗೆ ಹಣ ಜಮಾ ಮಾಡಲು ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಹೋಗಿದ್ದರು.</p>.<p>ತಿಂಗಳ ಮೊದಲ ದಿನವಾದ್ದರಿಂದ ಬ್ಯಾಂಕ್ನಲ್ಲಿ ಉದ್ದನೆಯ ಸಾಲು ಇತ್ತು. ಬಹಳ ಹೊತ್ತು ಸಾಲಿನಲ್ಲಿ ನಿಂತಿದ್ದರಿಂದ ಅಯಾಸಗೊಂಡ ಅವರು ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟರು. ಈ ಹಿಂದೆಯೂ ಅವರಿಗೆ ಹೃದಯಾಘಾತವಾಗಿತ್ತು ಎಂದು ಅವರ ಅಳಿಯ ಬಸವರಾಜ ತಿಳಿಸಿದರು. ಅಯ್ಯನಗೌಡರ ಅವರಿಗೆ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.<br /> <br /> ಗ್ರಾಹಕರು ಹೇಳುವ ಪ್ರಕಾರ ಅಯ್ಯನಗೌಡರ ಅವರು ಅಯಾಸಗೊಂಡು ಬ್ಯಾಂಕಿನ ಬೆಂಚಿನ ಮೇಲೆ ಕುಳಿತಿದ್ದರು. ಈ ವೇಳೆ ಪ್ರಾಣ ಹೋಗಿದೆ</p>.<p><strong>-ತಿಮ್ಮಾರೆಡ್ಡಿ</strong><br /> ವ್ಯವಸ್ಥಾಪಕ, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>