ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಬಸ್‍ಗೆ ಬೆಂಕಿ; ಪ್ರಾಣಾಪಾಯದಿಂದ ಪಾರಾದ 40 ವಿದ್ಯಾರ್ಥಿಗಳು

Last Updated 3 ಡಿಸೆಂಬರ್ 2016, 8:58 IST
ಅಕ್ಷರ ಗಾತ್ರ

ಚನ್ನಪಟ್ಟಣ: ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಿಎಂಟಿಸಿ ಬಸ್‍ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಮೀಪ ಮುದುಗೆರೆ ಎಂಬಲ್ಲಿ ಬೆಂಕಿಗಾಹುತಿಯಾಗಿದೆ.

ಬಸ್‍ನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ  ರಸ್ತೆಯ ಬದಿಯಲ್ಲಿ ಬಸ್ ನಿಲ್ಲಿಸಿ ಮಕ್ಕಳನ್ನು ಕೆಳಗಿಳಿಸಲಾಗಿತ್ತು. ಅದೃಷ್ಟವಶಾತ್, ಯಾರೊಬ್ಬರಿಗೂ ಪ್ರಾಣಾಪಾಯವೇನೂ ಸಂಭವಿಸಿಲ್ಲ.

ಬಸ್ಸಿನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಇದ್ದರು.

ನಗರದ ಬಿಇಎಲ್ ಹೈಸ್ಕೂಲ್ ಮಕ್ಕಳನ್ನು ಶ್ರೀರಂಗಪಟ್ಟಣಕ್ಕೆ ಪ್ರವಾಸ ಕರೆದೊಯ್ಯಲಾಗುತ್ತಿತ್ತು. 6 ಬಸ್‍ಗಳಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತಿದ್ದು ದಾರಿ ಮಧ್ಯೆ ಈ ಘಟನೆ ಸಂಭವಿಸಿದೆ.

ಈ ಘಟನೆಯ ನಂತರ ಪ್ರವಾಸವನ್ನು ಕೈ ಬಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT