ಚನ್ನಪಟ್ಟಣ: ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಿಎಂಟಿಸಿ ಬಸ್ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಮೀಪ ಮುದುಗೆರೆ ಎಂಬಲ್ಲಿ ಬೆಂಕಿಗಾಹುತಿಯಾಗಿದೆ.
ಬಸ್ನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಸ್ತೆಯ ಬದಿಯಲ್ಲಿ ಬಸ್ ನಿಲ್ಲಿಸಿ ಮಕ್ಕಳನ್ನು ಕೆಳಗಿಳಿಸಲಾಗಿತ್ತು. ಅದೃಷ್ಟವಶಾತ್, ಯಾರೊಬ್ಬರಿಗೂ ಪ್ರಾಣಾಪಾಯವೇನೂ ಸಂಭವಿಸಿಲ್ಲ.
ಬಸ್ಸಿನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಇದ್ದರು.
ನಗರದ ಬಿಇಎಲ್ ಹೈಸ್ಕೂಲ್ ಮಕ್ಕಳನ್ನು ಶ್ರೀರಂಗಪಟ್ಟಣಕ್ಕೆ ಪ್ರವಾಸ ಕರೆದೊಯ್ಯಲಾಗುತ್ತಿತ್ತು. 6 ಬಸ್ಗಳಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತಿದ್ದು ದಾರಿ ಮಧ್ಯೆ ಈ ಘಟನೆ ಸಂಭವಿಸಿದೆ.