</p><p>ಸಾಹಿತ್ಯ ಸಮ್ಮೇಳನದಲ್ಲಿ ಕಾಣಿಸಿಕೊಂಡ ಈ ಫ್ಲೆಕ್ಸ್ ಬರಹದ ಬಗ್ಗೆ ಸಾಮಾಜಿಕ ತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ವಾಟ್ಸಪ್ ನಲ್ಲಿ ಹರಿದಾಡುತ್ತಿರುವ ತಿರುಚಲ್ಪಟ್ಟ ವಚನಗಳನ್ನೇ ಸರ್ವಜ್ಞನ ವಚನ ಎಂದು ಫ್ಲೆಕ್ಸ್ ನಲ್ಲಿ ಪ್ರಕಟಿಸಿದ್ದರೆ ಬಗ್ಗೆ ಕೆಲವರು ಆಕ್ರೋಶ ವ್ಯಕ್ತ ಪಡಿಸಿದ್ದರೆ, ಇನ್ನು ಕೆಲವರು ಅದರಲ್ಲಿರುವ ಅಕ್ಷರ ತಪ್ಪುಗಳ ಬಗ್ಗೆ ಬೊಟ್ಟು ಮಾಡಿದ್ದಾರೆ.</p><p>ಫ್ಲೆಕ್ಸ್ ಫೋಟೋ ಶೇರ್ ಮಾಡಿರುವ ಕೆಲವು ನೆಟಿಜನ್ಗಳು ಆಯೋಜಕರ ವಿರುದ್ಧವೂ ಕಿಡಿ ಕಾರಿದ್ದಾರೆ.<br/> *<br/> <strong>ಕಿಡಿಗೇಡಿಗಳ ಕೃತ್ಯ</strong><br/> ‘ವಿವಾದಕ್ಕೆ ಕಾರಣವಾದ ಫ್ಲೆಕ್ಸ್ ಅನ್ನು ಯಾರೋ ಕಿಡಿಗೇಡಿಗಳು ಹಾಕಿದ್ದಾರೆ. ಈ ಬಗ್ಗೆ ರಾಯಚೂರು ಜಿಲ್ಲಾಧಿಕಾರಿ ಮತ್ತು ಎಸ್ಪಿ ಜತೆಗೆ ಮಾತನಾಡಿದ್ದೇನೆ. ಫ್ಲೆಕ್ಸ್ ಹಾಕಿದ್ದು ಯಾರು ಎಂಬ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರಿಗೆ ಮನವಿ ಮಾಡಿದ್ದೇನೆ’<br/> <strong>–ಮನು ಬಳಿಗಾರ್,</strong><br/> ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ</p><p> </p></p>