<p><strong>ರಾಯಚೂರು:</strong> 83ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.</p>.<p>ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಮುಂದಿನ ಸಮ್ಮೇಳನವನ್ನು ತಮ್ಮ ಜಿಲ್ಲೆಯಲ್ಲಿ ನಡೆಸಬೇಕು ಎಂದು ಮೈಸೂರು, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಗಳವರು ಕೋರಿಕೆ ಮಂಡಿಸಿದರು.</p>.<p>ಸಭೆಯಲ್ಲಿ ಒಮ್ಮತಾಭಿಪ್ರಾಯ ವ್ಯಕ್ತವಾಗದಾಗ ಮತದಾನದ ವಿಷಯ ಪ್ರಸ್ತಾಪವಾಯಿತು. ಧಾರವಾಡದಲ್ಲಿಯೇ ಮುಂದಿನ ಸಮ್ಮೇಳನ ನಡೆಸಬೇಕು ಎಂದು ಪಟ್ಟುಹಿಡಿದ ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ, ‘ಸ್ಥಳ ಆಯ್ಕೆಗೆ ಬಹಿರಂಗ ಮತದಾನ ಬೇಡ. ಗೋಪ್ಯ ಮತದಾನ ಮಾಡಬೇಕು’ ಎಂದು ಪಟ್ಟುಹಿಡಿದರು. ಈ ಹಂತದಲ್ಲಿ ವಾಗ್ವಾದ ನಡೆದು ನಂತರ ಅವರು ಸಭೆ ಬಹಿಷ್ಕರಿಸುವುದಾಗಿ ಹೇಳಿ ಹೊರ ಬಂದರು. ಅವರನ್ನು ಮನವೊಲಿಸಿ ಸಭೆಗೆ ಕರೆದೊಯ್ಯಲಾಯಿತು.</p>.<p>ಮತದಾನ ಕೈಬಿಟ್ಟು ಕಾರ್ಯಕಾರಿ ಸಮಿತಿ ಸದಸ್ಯರ ವೈಯಕ್ತಿಕ ಅಭಿಪ್ರಾಯ ಕೇಳಲಾಯಿತು. ಏಳು ಜನರು ಮೈಸೂರು, ಏಳು ಜನ ಹಾವೇರಿ ಹಾಗೂ ಒಂದಿಬ್ಬರು ಧಾರವಾಡದಲ್ಲಿ ಸಮ್ಮೇಳನ ನಡೆಸಬೇಕು ಎಂದರೆ, ಉಳಿದವರು ಕಸಾಪ ಅಧ್ಯಕ್ಷರ ನಿರ್ಣಯಕ್ಕೆ ತಾವು ಬದ್ಧ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.</p>.<p>‘ಹಲವು ಜಿಲ್ಲೆಗಳ ಹೆಸರು ಪ್ರಸ್ತಾಪಕ್ಕೆ ಬಂದವು. ಮುಕ್ತವಾಗಿ ಚರ್ಚಿಸಲಾಯಿತು. ಅಂತಿಮವಾಗಿ ಮೈಸೂರಿನಲ್ಲಿ ಮುಂದಿನ ಸಮ್ಮೇಳನ ನಡೆಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು’ ಎಂದು ಮನು ಬಳಿಗಾರ್ ತಿಳಿಸಿದರು.</p>.<p>ಫಲಿಸಿದ ಸಂಘಟಿತ ಪ್ರಯತ್ನ: ಮುಂದಿನ ಸಮ್ಮೇಳನ ಮೈಸೂರಿನಲ್ಲಿಯೇ ನಡೆಸಬೇಕು. ಅದಕ್ಕೆ ಬೇಕಿರುವ ಸಕಲ ವ್ಯವಸ್ಥೆ ಮಾಡಲು ತಾವು ಬದ್ಧ ಎಂದು ಆ ಜಿಲ್ಲೆಯ ಸಚಿವರು ಭರವಸೆ ನೀಡಿದ್ದರು. ಈ ವಿಷಯದಲ್ಲಿ ಮೈಸೂರು ಜಿಲ್ಲಾ ಕಸಾಪ ಪದಾಧಿಕಾರಿಗಳು ಹಲವು ದಿನಗಳಿಂದ ಕೇಂದ್ರ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರ ಮನವೊಲಿಸುವಲ್ಲಿ ನಿರತರಾಗಿದ್ದರು. ಈ ಸಂಘಟಿತ ಪ್ರಯತ್ನದ ಫಲವಾಗಿ ಮೈಸೂರಿಗೆ ಸಮ್ಮೇಳನದ ಆತಿಥ್ಯ ವಹಿಸಿಕೊಳ್ಳುವ ಅವಕಾಶ ದೊರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> 83ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.</p>.<p>ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಮುಂದಿನ ಸಮ್ಮೇಳನವನ್ನು ತಮ್ಮ ಜಿಲ್ಲೆಯಲ್ಲಿ ನಡೆಸಬೇಕು ಎಂದು ಮೈಸೂರು, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಜಿಲ್ಲೆಗಳವರು ಕೋರಿಕೆ ಮಂಡಿಸಿದರು.</p>.<p>ಸಭೆಯಲ್ಲಿ ಒಮ್ಮತಾಭಿಪ್ರಾಯ ವ್ಯಕ್ತವಾಗದಾಗ ಮತದಾನದ ವಿಷಯ ಪ್ರಸ್ತಾಪವಾಯಿತು. ಧಾರವಾಡದಲ್ಲಿಯೇ ಮುಂದಿನ ಸಮ್ಮೇಳನ ನಡೆಸಬೇಕು ಎಂದು ಪಟ್ಟುಹಿಡಿದ ಧಾರವಾಡ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ, ‘ಸ್ಥಳ ಆಯ್ಕೆಗೆ ಬಹಿರಂಗ ಮತದಾನ ಬೇಡ. ಗೋಪ್ಯ ಮತದಾನ ಮಾಡಬೇಕು’ ಎಂದು ಪಟ್ಟುಹಿಡಿದರು. ಈ ಹಂತದಲ್ಲಿ ವಾಗ್ವಾದ ನಡೆದು ನಂತರ ಅವರು ಸಭೆ ಬಹಿಷ್ಕರಿಸುವುದಾಗಿ ಹೇಳಿ ಹೊರ ಬಂದರು. ಅವರನ್ನು ಮನವೊಲಿಸಿ ಸಭೆಗೆ ಕರೆದೊಯ್ಯಲಾಯಿತು.</p>.<p>ಮತದಾನ ಕೈಬಿಟ್ಟು ಕಾರ್ಯಕಾರಿ ಸಮಿತಿ ಸದಸ್ಯರ ವೈಯಕ್ತಿಕ ಅಭಿಪ್ರಾಯ ಕೇಳಲಾಯಿತು. ಏಳು ಜನರು ಮೈಸೂರು, ಏಳು ಜನ ಹಾವೇರಿ ಹಾಗೂ ಒಂದಿಬ್ಬರು ಧಾರವಾಡದಲ್ಲಿ ಸಮ್ಮೇಳನ ನಡೆಸಬೇಕು ಎಂದರೆ, ಉಳಿದವರು ಕಸಾಪ ಅಧ್ಯಕ್ಷರ ನಿರ್ಣಯಕ್ಕೆ ತಾವು ಬದ್ಧ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.</p>.<p>‘ಹಲವು ಜಿಲ್ಲೆಗಳ ಹೆಸರು ಪ್ರಸ್ತಾಪಕ್ಕೆ ಬಂದವು. ಮುಕ್ತವಾಗಿ ಚರ್ಚಿಸಲಾಯಿತು. ಅಂತಿಮವಾಗಿ ಮೈಸೂರಿನಲ್ಲಿ ಮುಂದಿನ ಸಮ್ಮೇಳನ ನಡೆಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು’ ಎಂದು ಮನು ಬಳಿಗಾರ್ ತಿಳಿಸಿದರು.</p>.<p>ಫಲಿಸಿದ ಸಂಘಟಿತ ಪ್ರಯತ್ನ: ಮುಂದಿನ ಸಮ್ಮೇಳನ ಮೈಸೂರಿನಲ್ಲಿಯೇ ನಡೆಸಬೇಕು. ಅದಕ್ಕೆ ಬೇಕಿರುವ ಸಕಲ ವ್ಯವಸ್ಥೆ ಮಾಡಲು ತಾವು ಬದ್ಧ ಎಂದು ಆ ಜಿಲ್ಲೆಯ ಸಚಿವರು ಭರವಸೆ ನೀಡಿದ್ದರು. ಈ ವಿಷಯದಲ್ಲಿ ಮೈಸೂರು ಜಿಲ್ಲಾ ಕಸಾಪ ಪದಾಧಿಕಾರಿಗಳು ಹಲವು ದಿನಗಳಿಂದ ಕೇಂದ್ರ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರ ಮನವೊಲಿಸುವಲ್ಲಿ ನಿರತರಾಗಿದ್ದರು. ಈ ಸಂಘಟಿತ ಪ್ರಯತ್ನದ ಫಲವಾಗಿ ಮೈಸೂರಿಗೆ ಸಮ್ಮೇಳನದ ಆತಿಥ್ಯ ವಹಿಸಿಕೊಳ್ಳುವ ಅವಕಾಶ ದೊರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>