ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಧರಿಸಿದ್ದ ಹ್ಯೂಬ್ಲೋಟ್ ವಾಚ್ ಬಗ್ಗೆ ನ್ಯಾಯಾಧೀಶರ ಮೇಲ್ವಿಚಾರಣೆಗೆ ತನಿಖೆ ನಡೆಸಲು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಸಿದ್ದರಾಮಯ್ಯ ಅವರು ಲಂಚಕ್ಕೆ ಬದಲಾಗಿ ದುಬಾರಿ ವಾಚ್ ಉಡುಗೊರೆಯಾಗಿ ಪಡೆದಿದ್ದಾರೆ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ದೂರು ನೀಡಿದ್ದರೂ ಎಫ್ಐಆರ್ ದಾಖಲಿಸಿಲ್ಲ. ಹೀಗಾಗಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಅಬ್ರಾಹಂ ಅ.7ರಂದು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.