‘ಸುಕನ್ಯಾ ಅವರು ಸಂಬಂಧಿಕರಿಗೆ ನೀಡಲೆಂದು ರದ್ದಾದ ₹500, ₹1,000 ಮುಖಬೆಲೆಯ ಸುಮಾರು ₹8 ಲಕ್ಷದೊಂದಿಗೆ ಮೆಜೆಸ್ಟಿಕ್ನಿಂದ ಪದ್ಮನಾಭನಗರಕ್ಕೆ ರಾತ್ರಿ 9ರ ಸುಮಾರಿಗೆ ಆಟೊದಲ್ಲಿ ಹೋಗುತ್ತಿದ್ದರು. ಇದೇ ವೇಳೆ ಗಿರಿನಗರ ಠಾಣೆ ವ್ಯಾಪ್ತಿಯ ಸೀತಾ ವೃತ್ತದಲ್ಲಿ ಗಸ್ತಿನಲ್ಲಿದ್ದ ಕಾನ್ಸ್ಟೆಬಲ್ಗಳಿಬ್ಬರು ಅವರನ್ನು ತಡೆದು ಹಣ ದರೋಡೆ ಮಾಡಿದ್ದಾರೆ ಎಂದು ದೂರಿದ್ದಾರೆ. ಆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ದಕ್ಷಿಣ ವಿಭಾಗದ ಡಿಸಿಪಿ ಶರಣಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.