ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಸೇತುವೆಯಲ್ಲಿ ಅಪಘಾತ ಸಾಫ್ಟ್‌ವೇರ್ ಎಂಜಿನಿಯರ್ ಸಾವು

Last Updated 3 ಡಿಸೆಂಬರ್ 2016, 19:44 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಮೇಲ್ಸೇತುವೆಯಲ್ಲಿ ಶುಕ್ರವಾರ ರಾತ್ರಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಸಾಫ್ಟ್‌ವೇರ್ ಎಂಜಿನಿಯರ್ ಚಂದ್ರಶೇಖರ್ (30) ಎಂಬುವರು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶ ಮೂಲದ ಚಂದ್ರಶೇಖರ್, 2 ವರ್ಷಗಳ ಹಿಂದೆ ನಗರಕ್ಕೆ ಬಂದು ಮಾರತ್ತಹಳ್ಳಿಯಲ್ಲಿ ನೆಲೆಸಿದ್ದರು. ಎಲೆಕ್ಟ್ರಾನಿಕ್‌ಸಿಟಿ 2ನೇ ಹಂತದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದರು.

ಮೇಲ್ಸೇತುವೆಯಲ್ಲಿ ಸಾಗುವಾಗ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಾಗ ಮೈಮೇಲೆ ಕಾರಿನ ಚಕ್ರ ಹರಿದಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರನ್ನು ಜಪ್ತಿ ಮಾಡಿ, ಚಾಲಕ ಸಪ್ತರ್ಷಿ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಲೆಕ್ಟ್ರಾನಿಕ್‌ಸಿಟಿ ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT