ಜಿಲ್ಲಾ ಪಂಚಾಯ್ತಿ ಸದಸ್ಯೆ ಲಾವಣ್ಯ ನರಸಿಂಹ ಮೂರ್ತಿ ಮಾತನಾಡಿ, ‘ರಾಜಾನುಕುಂಟೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಲವು ಬಡಾವಣೆಗಳು ತಲೆ ಎತ್ತುತ್ತಿವೆ. ಈ ಪ್ರದೇಶವು ಭೂ ಗಳ್ಳರು ಹಾಗೂ ರೌಡಿಗಳ ತಾಣವಾಗಿ ಮಾರ್ಪಡುತ್ತಿದೆ. ಭ್ರಷ್ಟ ವ್ಯವಸ್ಥೆಯನ್ನು ಬಯಲಿಗೆಳೆಯುವ ಸಲುವಾಗಿ ವರದಿ ಮಾಡಲು ತೆರಳಿದ್ದ ಮಂಜುನಾಥ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನೀಯ’ ಎಂದರು.