ಬೆಂಗಳೂರು: ತಮಿಳುನಾಡಿನ ತಿರುವಣ್ಣಾ ಮಲೈನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೇಲೆ ದಾಳಿ ನಡೆದ ಕಾರಣ ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇಂದು ಬೆಳಗ್ಗೆ ಕಿಡಿಗೇಡಿಗಳು ಕೆಎಸ್ಆರ್ಟಿಸಿ ಬಸ್ ಮೇಲೆ ಬಾಟಲಿ ಎಸೆದಿದ್ದು , ಬಸ್ ಹಿಂಬದಿಯ ಗಾಜು ಪುಡಿ ಪುಡಿಯಾಗಿದೆ.
ಈ ಘಟನೆಯ ನಂತರ ತಮಿಳುನಾಡಿಗೆ ಹೋಗುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪಿಆರ್ಒ ಹೇಳಿಕೆ ನೀಡಿದ್ದಾರೆ.
ಇತ್ತ, ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಟಿಎನ್ಎಸ್ಟಿಸಿ ಬಸ್ಗಳನ್ನು ತಮಿಳುನಾಡು ಸರ್ಕಾರ ವಾಪಸ್ ಕರೆಸಿಕೊಂಡಿದೆ.
K'taka State Road Transport Corp temporarily stop bus services to TN after an incident of stone pelting near Tiruvannamalai-Latha, KSRTC PRO