ನವದೆಹಲಿ: ಹೃದಯಾಘಾತಕ್ಕೊಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ 'ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ಯ (ಏಮ್ಸ್) ತಜ್ಞರ ತಂಡವನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ಸೋಮವಾರ ಕಳುಹಿಸಿಕೊಟ್ಟಿದೆ.
ನಾಲ್ವರು ತಜ್ಞರ ತಂಡ ಅಪೋಲೊ ಆಸ್ಪತ್ರೆ ತಲುಪಿ ಚಿಕಿತ್ಸೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಅಪೋಲೊ ಆಸ್ಪತ್ರೆ ಹಾಗೂ ತಮಿಳುನಾಡು ಸರ್ಕಾರ ಸಂಪರ್ಕದಲ್ಲಿದ್ದು, ಏಮ್ಸ್ನ ನಾಲ್ವರು ತಜ್ಞರ ತಂಡವನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.